ADVERTISEMENT

ಹಿಂಡಿಗನಾಳ: ಕಲ್ಯಾಣಿ ಸ್ವಚ್ಛತೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2020, 14:10 IST
Last Updated 15 ಫೆಬ್ರುವರಿ 2020, 14:10 IST
ಹಿಂಡಿಗನಾಳದ ಕಲ್ಯಾಣಿ ಸ್ವಚ್ಛತಾ ಸ್ಥಳಕ್ಕೆ ಶಾಸಕ ಶರತ್ ಬಚ್ಚೇಗೌಡ ಭೇಟಿ ನೀಡಿದ್ದರು
ಹಿಂಡಿಗನಾಳದ ಕಲ್ಯಾಣಿ ಸ್ವಚ್ಛತಾ ಸ್ಥಳಕ್ಕೆ ಶಾಸಕ ಶರತ್ ಬಚ್ಚೇಗೌಡ ಭೇಟಿ ನೀಡಿದ್ದರು   

ಹೊಸಕೋಟೆ: ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡಿಗನಾಳ ಗ್ರಾಮದ ಸಂತೆ ಹತ್ತಿರವಿರುವ ಶ್ರೀ ಅಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿರುವ ಪುರಾತನ ಕಲ್ಯಾಣಿಯನ್ನು ಶನಿವಾರ ಸ್ವಚ್ಛ ಮಾಡಲಾಯಿತು.

ಸ್ವಚ್ಛತಾ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸಿ.ಎಸ್. ಶ್ರೀನಾಥ್ ಗೌಡ ಹಾಗೂ ಸಹಾಯಕ ನಿರ್ದೇಶಕ ಅಮರನಾರಾಯಣಸ್ವಾಮಿ ಡಿ.ಎಂ. ಚಾಲನೆ ನೀಡಿದರು. ತಾಲ್ಲೂಕು ವ್ಯಾಪ್ತಿಯ ಎಲ್ಲ 28 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಬಿಲ್ ಕಲೆಕ್ಟರ್‌ಗಳು ಮತ್ತು ಕಂಪ್ಯೂಟರ್ ಆಪರೇಟರ್‌ಗಳು ಶ್ರಮದಾನ ಮಾಡಿದರು. ಈ ಮೂಲಕ ಕಲ್ಯಾಣಿ ಅಭಿವೃದ್ಧಿ ಮತ್ತು ಸ್ವಚ್ಛಗೊಳಿಸಿದರು.

ಸ್ಥಳಕ್ಕೆ ಶಾಸಕ ಶರತ್ ಬಚ್ಚೇಗೌಡ ಭೇಟಿ ನೀಡಿ ಕಾರ್ಯಕ್ರಮವನ್ನು ಆಯೋಜಿಸಿರುವ ತಾಲ್ಲೂಕು ಆಡಳಿತದ ಕೆಲಸವನ್ನು ಶ್ಲಾಘಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.