ADVERTISEMENT

ಜನೋತ್ಸವ ಚುನಾವಣೆ ದಿಕ್ಸೂಚಿ: ನಳಿನ್‌ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2022, 21:37 IST
Last Updated 3 ಸೆಪ್ಟೆಂಬರ್ 2022, 21:37 IST
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಶನಿವಾರ ನಡೆದ ಜನೋತ್ಸವ ಪೂರ್ವ ಸಿದ್ಧತಾ ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಸಚಿವರಾದ ಡಾ.ಕೆ.ಸುಧಾಕರ್‌, ಸಂಸದ ಮುನಿಸ್ವಾಮಿ ಇದ್ದರು
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಶನಿವಾರ ನಡೆದ ಜನೋತ್ಸವ ಪೂರ್ವ ಸಿದ್ಧತಾ ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಸಚಿವರಾದ ಡಾ.ಕೆ.ಸುಧಾಕರ್‌, ಸಂಸದ ಮುನಿಸ್ವಾಮಿ ಇದ್ದರು   

ದೊಡ್ಡಬೆಳವಂಗಲ (ದೊಡ್ಡಬಳ್ಳಾಪುರ): ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ನಡೆಯುವ ಬಿಜೆಪಿಯ ಜನೋತ್ಸವ ರಾಜ್ಯ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಜನೋತ್ಸವ ಪೂರ್ವ ಸಿದ್ದತೆ ಕುರಿತು ತಾಲ್ಲೂಕಿನ ದೊಡ್ಡಬೆಳವಂಗಲದ ಕಲ್ಯಾಣ ಮಂದಿರದಲ್ಲಿ ಶನಿವಾರ ನಡೆದ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದರು. ‘ಕರ್ನಾಟಕವನ್ನು ಉಳಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಭಾವನೆ ಜನರಲ್ಲಿದೆ. ರಾಜ್ಯ ಮತ್ತು ದೇಶಕ್ಕೆ ಏಕೈಕ ನಾಯಕರು ನರೇಂದ್ರ ಮೋದಿ ಎಂಬ ಭಾವನೆ ಜನರದು. ರಾಜ್ಯದ ಜನರನ್ನು ಮುಟ್ಟುವ ಕಾರ್ಯವನ್ನು ನಮ್ಮ ಕಾರ್ಯಕರ್ತರು ಮಾಡಬೇಕಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT