ADVERTISEMENT

ದೊಡ್ಡಬಳ್ಳಾಪುರ: ಕಾರ್ತಿಕ ಪೂಜೆ, ದೀಪೋತ್ಸವ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 2:38 IST
Last Updated 19 ನವೆಂಬರ್ 2025, 2:38 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರವಣೂರು ಗ್ರಾಮದ ನೀಲಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಕಾರ್ತೀಕ ಸೋಮವಾರದ ಪ್ರಯುಕ್ತ ವಿಶೇಷ ಅಲಂಕಾರ
ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರವಣೂರು ಗ್ರಾಮದ ನೀಲಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಕಾರ್ತೀಕ ಸೋಮವಾರದ ಪ್ರಯುಕ್ತ ವಿಶೇಷ ಅಲಂಕಾರ   

ದೊಡ್ಡಬಳ್ಳಾಪುರ: ಕಾರ್ತೀಕ ಮಾಸದ ಕೊನೆಯ ಸೋಮವಾರ ಹಿನ್ನೆಲೆಯಲ್ಲಿ ತಾಲ್ಲೂಕಿನ ವಿವಿಧ ದೇಗುಲಗಳಲ್ಲಿ ಪೂಜಾ ಕೈಂಕರ್ಯ ಹಾಗೂ ದೀಪೋತ್ಸವ ಜರುಗಿತು.

ದೊಡ್ಡಬೆಳವಂಗಲ ಸಮೀಪದ ತೋಪನಯ್ಯಸ್ವಾಮಿ, ಹುಲುಕುಡಿ ಬೆಟ್ಟದ ವೀರಭದರ, ಶಿರವಾರದಲ್ಲಿನ ಬಸವಣ್ಣ ದೇವಾಲಯ, ಎಸ್‌.ಎಂ.ಗೊಲ್ಲಹಳ್ಳಿ ಸಮೀಪದ ದಿನ್ನೆ ಬಸವಣ್ಣ, ನಗರದ ಮುಖ್ಯರಸ್ತೆಯಲ್ಲಿನ ನಗರೇಶ್ವರ,  ಕೊಂಡಸಂದ್ರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕಡೆ ಕಾರ್ತಿಕ ಪೂಜೆ, ಸಂಜೆಯಾಗುತ್ತಲೇ ದೇವಾಲಯಗಳಲ್ಲಿ ದೀಪೋತ್ಸವ ನಡೆಯಿತು.

ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿನ ಬಯಲು ಬಸವಣ್ಣ ದೇವಾಲಯದ ಬಳಿ ಕಡಲೇಕಾಯಿ ಪರಿಷೆ ನಡೆಯಿತು. ಮಂಜುನಾಥಸ್ವಾಮಿಗೆ, ಬಸವಣ್ಣ ಹಾಗೂ ಗಣಪತಿ ದೇವತಾ ಮೂರ್ತಿಗಳಿಗೆ ವಿಶೇಷ ಕಡಲೇ ಕಾಯಿ ಅಲಂಕಾರ ಮಾಡಲಾಗಿತ್ತು. ದೇವಾಲಯಕ್ಕೆ ಆಗಮಿಸಿದ್ದ ನೂರಾರು ಜನ ಭಕ್ತಾದಿಗಳಿಗೆ ಕಡಲೇಕಾಯಿ ಪ್ರಸಾದ ವಿತರಿಸಲಾಯಿತು.

ADVERTISEMENT
ದೊಡ್ಡಬಳ್ಳಾಪುರದ ಸ್ವಯಂಬುಕೇಶ್ವರನಿಗೆ  ಅಲಂಕಾರ
ದೊಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂಭುವೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಜೆ ಕಾರ್ತಿಕ ಸೋಮವಾರದ ಪ್ರಯುಕ್ತ ಲಕ್ಷ ದೀಪೋತ್ಸವ ನಡೆಯಿತು
ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿನ ಬಯಲು ಬಸವಣ್ಣ ದೇವಾಲಯದ ಬಳಿ ಕಡಲೇಕಾಯಿ ಪರಿಷೆಯಲ್ಲಿ ಭಕ್ತಾದಿಗಳಿಗೆ ಕಡಲೆ ಕಾಯಿ ಪ್ರಸಾದ ವಿತರಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.