ADVERTISEMENT

ಕೃಷ್ಣ ವೇಷಭೂಷಣ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 3:48 IST
Last Updated 2 ಸೆಪ್ಟೆಂಬರ್ 2021, 3:48 IST
ದೊಡ್ಡಬಳ್ಳಾಪುರದಲ್ಲಿ ಯಾದವ ಸೇವಾ ಪ್ರತಿಷ್ಠಾನ ಹಾಗೂ ಬಾಲಗೋಕುಲದ ವತಿಯಿಂದ ನಡೆದ ಶ್ರೀಕೃಷ್ಣ ವೇಷಧಾರಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಕ್ಕಳು
ದೊಡ್ಡಬಳ್ಳಾಪುರದಲ್ಲಿ ಯಾದವ ಸೇವಾ ಪ್ರತಿಷ್ಠಾನ ಹಾಗೂ ಬಾಲಗೋಕುಲದ ವತಿಯಿಂದ ನಡೆದ ಶ್ರೀಕೃಷ್ಣ ವೇಷಧಾರಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಕ್ಕಳು   

ದೊಡ್ಡಬಳ್ಳಾಪುರ:ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಯಾದವ ಸೇವಾ ಪ್ರತಿಷ್ಠಾನ ಹಾಗೂ ಬಾಲಗೋಕುಲ ವತಿಯಿಂದ ಶ್ರೀಕೃಷ್ಣ ವೇಷಧಾರಿ ಸ್ಪರ್ಧೆ ನಡೆಯಿತು.

ನಗರದ ಭಗತ್‌ಸಿಂಗ್ ಕ್ರೀಡಾಂಗಣ ಸಮೀಪದ ಶಿವಗಂಗಾ ಕಾರ್ಯಾಲಯದಲ್ಲಿ ಕೋವಿಡ್ ನಿಯಮದಡಿ ಸ್ಪರ್ಧೆ ಆಯೋಜಿಸಿದ್ದು, ಸುಮಾರು 70ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಮಕ್ಕಳು ರಾಧಾ ಹಾಗೂ ಶ್ರೀಕೃಷ್ಣನ ವೇಷಧರಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಈ ವೇಳೆ ಉತ್ತಮವಾಗಿ ವೇಷಭೂಷಣ ಧರಿಸಿದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಯಾದವ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಬಾಬು, ಖಜಾಂಚಿ ಎನ್. ರಘು, ಬಾಲಗೋಕುಲ ಸಂಯೋಜಕ ಕಾರ್ತಿಕ್, ಆರ್.ಎಲ್. ಜಾಲಪ್ಪ ಕಾಲೇಜಿನ ಪ್ರಾಧ್ಯಾಪಕ ತಿರುಮಲೇಶ್, ಜಿಲ್ಲಾ ಸಂಯೋಜಕ ಕುಟುಂಬ ಪ್ರಬೋಧನ್‌, ಸನತ್‌ಮೂರ್ತಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.