ADVERTISEMENT

ಎರಡು ಮರಿಗಳೊಂದಿಗೆ ಚಿರತೆ ಪ್ರತ್ಯಕ್ಷ: ಆತಂಕ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 5:05 IST
Last Updated 7 ಡಿಸೆಂಬರ್ 2022, 5:05 IST

ತೂಬಗೆರೆ (ದೊಡ್ಡಬಳ್ಳಾಪುರ): ತಾಲ್ಲೂಕಿನಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ರಸ್ತೆಯಲ್ಲಿ ಮಂಗಳವಾರ ಸಂಜೆ ಕೃಷ್ಣಮೂರ್ತಿ ಎಂಬುವರ ವಾಹನಕ್ಕೆ ಲಘುಮೇನಹಳ್ಳಿ ಕ್ರಾಸ್ ಬಳಿ ಚಿರತೆ ಎದುರಾಗಿದ್ದರಿಂದ ಆತಂಕಗೊಂಡ ಅವರು ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ‍ಪರಿಶೀಲಿಸಿದರು.

ಬೆಂಗಳೂರು ಸುತ್ತಮುತ್ತ ಚಿರತೆ ಉಪಟಳದ ಆತಂಕದ ನಡುವೆಯೇ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಾಗುವ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು ಕ್ಷೇತ್ರಕ್ಕೆ ಹೋಗುವ ಭಕ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಲಘುಮೇನಹಳ್ಳಿ ಕ್ರಾಸ್ ಸಮೀಪ ಚಿರತೆಯು ತನ್ನ ಎರಡು ಮರಿಗಳೊಂದಿಗೆ ರಸ್ತೆ ದಾಟಿದ್ದನ್ನು ಕಂಡಿರುವುದಾಗಿ ಇದೇ ರಸ್ತೆಯಲ್ಲಿ ಸಾಗಿದ್ದ ಕೆಲವು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಒಂದು ವಾರದ ಹಿಂದೆಯಷ್ಟೇ ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ಚನ್ನಾಪುರ ಗ್ರಾಮದ ಅಂಚಿನಲ್ಲಿ ಕುರಿ ದೊಡ್ಡಿಗೆ ನುಗ್ಗಿದ್ದ ಚಿರತೆಯು ಕುರಿಯನ್ನು ತಿಂದು ಹಾಕಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.