ADVERTISEMENT

ಆನೇಕಲ್: ಬನ್ನೇರುಘಟ್ಟ ಉದ್ಯಾನದಲ್ಲಿ ಸಿಂಹಿಣಿ ಸಾವು

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 4:55 IST
Last Updated 5 ಮಾರ್ಚ್ 2023, 4:55 IST
ನಂದಿನಿ
ನಂದಿನಿ   

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದ ಎರಡು ವರ್ಷದ ಸಿಂಹಿಣಿ ನಂದಿನಿ ನರಸಂಬಂಧಿ ಕಾಯಿಲೆಯಿಂದ ಶನಿವಾರ ಮೃತಪಟ್ಟಿದೆ.

ಉದ್ಯಾನದ ಸಿಂಹಗಳಾದ ಸಾನಿಯಾ ಮತ್ತು ರಾಮ ದಂಪತಿಗೆ 2021ರ ಏಪ್ರಿಲ್ 3ರಂದು ಸಿಂಹಿಣಿ ನಂದಿನಿ ಜನಿಸಿತ್ತು. ಹುಟ್ಟಿನಿಂದಲೂ ನರಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸಿಂಹಿಣಿಗೆ ಪ್ರಾಣಿ ಪುನರ್ವಸತಿ ಕೇಂದ್ರದಲ್ಲಿ ಪಾಲನೆ ಮಾಡಲಾಗುತ್ತಿತ್ತು. ವೈದ್ಯರೂ ನಿರಂತರವಾಗಿ ಔಷಧ ಉಪಚಾರ ಮಾಡುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಸಿಂಹಿಣಿ ಮೃತಪಟ್ಟಿದೆ ಎಂದು ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT