ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಾಗಪೂಜಾ ವೈನ್ಸ್ ಬಾಗಿಲು ಒಡೆದಿರುವ ಕಳ್ಳರು, ಮದ್ಯದ ಬಾಟಲ್ಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಸರ್ಕಾರ ಮದ್ಯದ ವ್ಯಾಪಾರ ನಿಷೇಧಿಸಿದೆ. 13 ರಿಂದ ಬಾರ್ಗಳನ್ನು ಬಂದ್ ಮಾಡಲಾಗಿದೆ. ಬಾರ್ನಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿತ್ತಾದರೂ ಚಾಲಾಕಿ ಕಳ್ಳರು ಸಿಸಿ ಕ್ಯಾಮೆರಾಗಳಿಗೂ ಹಾನಿ ಮಾಡಿ ಮದ್ಯ ಕಳವು ಮಾಡಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.