ಹೊಸಕೋಟೆ: ನಗರದ ಕಾಲೇಜು ರಸ್ತೆಯಲ್ಲಿರುವ ಸುಜಾತ ಕ್ಲಿನಿಕ್ನಲ್ಲಿ ಅಲೋಪತಿ ಔಷಧಿ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಮಂಜುಳಾ ದೇವಿ ನೇತೃತ್ವದ ತಂಡ ಬುಧವಾರ ಕ್ಲಿನಿಕ್ಗೆ ಬೀಗಮುದ್ರೆ ಹಾಕಿತು.
ಕೆಲವು ದಿನಗಳ ಹಿಂದೆಯಷ್ಟೇ ತಾಲ್ಲೂಕು ವೈದ್ಯಾಧಿಕಾರಿ ಈ ಕ್ಲಿನಿಕ್ನಲ್ಲಿ ಸುಮಾರು ₹ 10 ಲಕ್ಷ ಮೌಲ್ಯದ ಅಲೋಪತಿ ಔಷಧಿಗಳನ್ನು ಜಪ್ತಿ ಮಾಡಿದ್ದರು.
ಜಿಲ್ಲಾ ಆರೋಗ್ಯಾಧಿಕಾರಿ ಮಂಜುಳಾ ದೇವಿ ಮಾತನಾಡಿ, ಕೆ.ಪಿ.ಎಂ.ಇಯಡಿ ಕ್ಲಿನಿಕ್ ಪರವಾನಗಿ ನವೀಕರಣಗೊಂಡಿಲ್ಲ. ಅನುಮತಿಯಿಲ್ಲದೆ ಅಲೋಪತಿ ಔಷಧಿ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ವೈದ್ಯರಿಗೆ ನೋಟಿಸ್ ನೀಡಲಾಗಿದೆ. ಅವರು ನೀಡುವ ಉತ್ತರ ಸೂಕ್ತವಾಗಿದ್ದರೆ ಅವರಿಗೆ ಮತ್ತೆ ಕ್ಲಿನಿಕ್ ನಡೆಸಲು ಅನುಮತಿ ನೀಡಲಾಗುವುದು. ಇಲ್ಲದಿದ್ದರೆ ಕಾನೂನು ರೀತಿಯಲ್ಲಿ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.
ಡಾ.ಶ್ರೀನಿವಾಸ್, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮತ್ತು ಪೊಲೀಸರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.