ADVERTISEMENT

ದೇವನಹಳ್ಳಿ: ಫೆ.29 ರಂದು ಮಹರ್ಷಿ ವಾಲ್ಮೀಕಿ ದೇಗುಲ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 13:36 IST
Last Updated 27 ಫೆಬ್ರುವರಿ 2024, 13:36 IST
ವಿಜಯಪುರದಲ್ಲಿ ಗುರುವಾರ ಉದ್ಘಾಟನೆಗೊಳ್ಳಲಿರುವ ಮಹರ್ಷಿ ವಾಲ್ಮೀಕಿ ದೇವಾಲಯ
ವಿಜಯಪುರದಲ್ಲಿ ಗುರುವಾರ ಉದ್ಘಾಟನೆಗೊಳ್ಳಲಿರುವ ಮಹರ್ಷಿ ವಾಲ್ಮೀಕಿ ದೇವಾಲಯ   

ವಿಜಯಪುರ(ದೇವನಹಳ್ಳಿ): ಪಟ್ಟಣದ ಬಸ್ ನಿಲ್ದಾಣದ ಬಳಿ ಮಂಡಿಬೆಲೆ ರಸ್ತೆಯಲ್ಲಿರುವ ಮಹರ್ಷಿ ವಾಲ್ಮೀಕಿ ಉದ್ಯಾನವನದಲ್ಲಿ ನವೀಕರಣಗೊಂಡಿರುವ ಮಹರ್ಷಿ ವಾಲ್ಮೀಕಿ ದೇವಾಲಯದ ಉದ್ಘಾಟನೆ ಫೆ.29 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ದೇವಸ್ಥಾನ ಉದ್ಘಾಟಿಸಲಿದ್ದು,  ಮಹರ್ಷಿ ವಾಲ್ಮೀಕಿ ಗುರುಪೀಠಾಧ್ಯಕ್ಷ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸಚಿವ ಸತೀಶ್ ಜಾರಕಿಹೋಳಿ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಪುರಸಭೆ ಅಧ್ಯಕ್ಷೆ ವಿಮಲಾಬಸವರಾಜ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಎಲ್. ಶ್ರೀರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT