ದೊಡ್ಡಬಳ್ಳಾಪುರ: ತಾಲ್ಲೂಕಿನ ಮಲ್ಲಾತಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಸಂಘದ ಆವರಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ವಿ.ನಾಗರಾಜ್ ಮಾತನಾಡಿ, ಈ ಸಾಲಿನಲ್ಲಿ ಸಂಘವು ₹2.17 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಹಾಲಿನ ಬಿಲ್ಗಳಿಗೆ ಅನುಸಾರವಾಗಿ ₹100ಗಳಿಗೆ ₹2.19 ಬೋನಸ್ ನೀಡಲಾಗುತ್ತಿದೆ. ಸಂಘದ ಸಾಧನೆ ಮುಂದುವರೆಯಬೇಕಾದರೆ ಸದಸ್ಯರು ಗುಣಮಟ್ಟದ ಹಾಲನ್ನು ಸರಬರಾಜು ಮಾಡಿ ಸಂಘದ ಏಳಿಗೆಗೆ ಶ್ರಮಿಸಬೇಕು ಎಂದರು.
ಸಭೆಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಎಂ.ಸಿ.ಆನಂದಮೂರ್ತಿ ಸಂಘದ ನಿರ್ದೇಶಕರು ಹಾಗೂ ಸದಸ್ಯರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.