ADVERTISEMENT

ಉಜ್ಜನಿ: ಚೆಕ್ ಡ್ಯಾಂಗೆ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2023, 7:30 IST
Last Updated 17 ಮಾರ್ಚ್ 2023, 7:30 IST

ದೊಡ್ಡಬಳ್ಳಾಪುರ: ತಾಲ್ಲೂಕಿನ ಉಜ್ಜನಿ ಗ್ರಾಮದ ಹಾಲಿನ ಡೇರಿ ಸಮೀಪ ನಿರ್ಮಿಸಿರುವ ಚೆಕ್‌ ಡ್ಯಾಂಗೆ ಬಿದ್ದು ಚಂದ್ರಶೇಖರ್(45) ಎಂಬುವರು ಮೃತಪಟ್ಟಿದ್ದಾರೆ.

ಪ್ರತಿದಿನ ಇದೇ ಚೆಕ್‌ ಡ್ಯಾಂ ಬಳಿ ಕುಳಿತು ಗಾಳದಲ್ಲಿ ಮೀನು ಹಿಡಿಯುತ್ತಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಡ್ಯಾಂನಲ್ಲಿ ಹೆಚ್ಚಿನ ನೀರು ಹಾಗೂ ಹೂಳು ಇದ್ದು, ಈ ಹೂಳಿನಲ್ಲಿ ಸಿಲುಕಿ ಮೃತಪಟ್ಟಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಹೊಸಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.