ADVERTISEMENT

ವಿಜಯಪುರ: ಮುಂಜಾಗ್ರತೆ ನಡುವೆ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 8:02 IST
Last Updated 19 ಜೂನ್ 2020, 8:02 IST
ಆನೇಕಲ್‌ನಲ್ಲಿ ಮಾಸ್ಕ್ ದಿನಾಚರಣೆ ಅಂಗವಾಗಿ ನಡೆದ ಜಾಗೃತಿ ಜಾಥಗೆ ತಹಶೀಲ್ದಾರ್ ಸಿ.ಮಹಾದೇವಯ್ಯ ಚಾಲನೆ ನೀಡಿದರು
ಆನೇಕಲ್‌ನಲ್ಲಿ ಮಾಸ್ಕ್ ದಿನಾಚರಣೆ ಅಂಗವಾಗಿ ನಡೆದ ಜಾಗೃತಿ ಜಾಥಗೆ ತಹಶೀಲ್ದಾರ್ ಸಿ.ಮಹಾದೇವಯ್ಯ ಚಾಲನೆ ನೀಡಿದರು   

ವಿಜಯಪುರ: ಕೋವಿಡ್-19 ಸೋಂಕಿನಿಂದ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಬರೆಯಲು ಗುರುವಾರ ಬೆಳಗ್ಗೆ 8.30ಕ್ಕೆ ಪರೀಕ್ಷಾ ಕೇಂದ್ರಗಳಿಗೆ ಬಂದಿದ್ದ ವಿದ್ಯಾರ್ಥಿಗಳನ್ನು ಆರೋಗ್ಯ ಸಹಾಯಕಿಯರಿಂದ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಕೈಗೆ ಸ್ಯಾನಿಟೈಸರ್ ಹಾಕಿ ಒಳ ಬಿಡಲಾಯಿತು.

ಇಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಮೂರು ದಿನಗಳ ಮುಂಚೆಯೇ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆ, ಕೋವಿಡ್-19 ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು.

ಬೆಳಗ್ಗೆ 10.15 ರಿಂದ 1.30ರವರೆಗೂ ಪರೀಕ್ಷೆ ನಡೆಯಿತು. ಪರೀಕ್ಷಾ ಕೇಂದ್ರಗಳ ಸುತ್ತಲೂ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ 144 ಸೆಕ್ಷನ್ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷೆಗೆ ಮುಗಿದ ನಂತರ ವಿದ್ಯಾರ್ಥಿಗಳನ್ನು ಅಂತರ ಕಾಪಾಡಿಕೊಂಡು ಹೊರಗೆ ಬಿಡಲಾಯಿತು. 370 ಮಂದಿ ವಿದ್ಯಾರ್ಥಿಗಳ ಪೈಕಿ 346 ಮಂದಿ ವಿಜಯಪುರದವರು, 24 ಮಂದಿ ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ADVERTISEMENT

ಅಂತರ ಕಾಪಾಡದ ವಿದ್ಯಾರ್ಥಿಗಳು: ಪರೀಕ್ಷಾ ಕೇಂದ್ರದ ಸಮೀಪದಲ್ಲಿ ಬೆಳಿಗ್ಗೆ ಜಮಾಯಿಸಿದ್ದ ವಿದ್ಯಾರ್ಥಿಗಳು, ಗುಂಪಾಗಿ ಕುಳಿತುಕೊಂಡು ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದರು. ಕೆಲವು ಸ್ನೇಹಿತರೊಂದಿಗೆ ಚರ್ಚೆ ಮಾಡುವಲ್ಲಿ ನಿರತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.