ವಿಜಯಪುರ: ‘ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಹಳಷ್ಟು ಮುಸ್ಲಿಂ ನಾಯಕರ ಹೆಸರು ಕೇಳಿ ಬರುತ್ತಿದ್ದು, ದೊಡ್ಡ ಜಾಲವೇ ಇದೆ. ಮುಖ್ಯಮಂತ್ರಿಗಳು ಎಸ್ಐಟಿಗೆ ಕೊಟ್ಟು ಅನುಕೂಲ ಮಾಡಿಕೊಡುತ್ತಿದ್ದಾರೆ. ಸಿಬಿಐ ತನಿಖೆ ಆಗಬೇಕು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರೋಪಿ ಜತೆಗೆ ಸಚಿವರು ಬಿರಿಯಾನಿ ತಿಂದಿದ್ದೆ ದೊಡ್ಡ ದುರಂತ. ಸಿದ್ದರಾಮಯ್ಯ ಕೂಡ ಹೊರತಲ್ಲ. ಅವರು ಈಗೇಕೆ ಸುಮ್ಮನೆ ಕುಳಿತಿದ್ದಾರೆ? ಈ ಪ್ರಕರಣದಲ್ಲಿ ಯಾವೆಲ್ಲ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎನ್ನುವುದರ ಬಗ್ಗೆ ಸಮಗ್ರ ತನಿಖೆ ಆಗಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.