ADVERTISEMENT

ಮೋದಿ ಜನ್ಮ ದಿನ ಸ್ವಚ್ಛತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 6:11 IST
Last Updated 18 ಸೆಪ್ಟೆಂಬರ್ 2020, 6:11 IST
ಮೋದಿ ಜನ್ಮ ದಿನಾಚರಣೆ ಅಂಗವಾಗಿ ದೇವಾಲಯ ಆವರಣ ಸ್ವಚ್ಛತೆ ಮಾಡಲಾಯಿತು
ಮೋದಿ ಜನ್ಮ ದಿನಾಚರಣೆ ಅಂಗವಾಗಿ ದೇವಾಲಯ ಆವರಣ ಸ್ವಚ್ಛತೆ ಮಾಡಲಾಯಿತು   

ದೊಡ್ಡಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ತಾಲ್ಲೂಕಿನ ರಾಜಘಟ್ಟ ಆಂಜನೇಯಸ್ವಾಮಿ ದೇವಾಲಯದ ಆವರಣ ಸ್ವಚ್ಛ ಮಾಡುವ ಮೂಲಕ ಆಚರಿಸಲಾಯಿತು.

ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ವಿಶ್ವಾಸ್‌ಗೌಡ ಮಾತನಾಡಿ, ‘ದೇಶ ಕಂಡ ಅಪ್ರತಿಮ ಪ್ರಧಾನಿ ಮೋದಿ ಅವರು ಕೋವಿಡ್-19 ಸಂಕಷ್ಟದಲ್ಲಿಯೂ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಇವರ ಜನ್ಮ ದಿನವನ್ನು ಸೇವಾ ದಿನಾಚರಣೆಯನ್ನಾಗಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ವಿವಿಧ ಸೇವಾ ಕಾರ್ಯಗಳನ್ನು ಕೈಗೊಂಡಿದ್ದಾರೆ ಶ್ಲಾಘನೀಯ’ ಎಂದರು.

ಮಂಡಲ ಅಧ್ಯಕ್ಷ ಕಿರಣ್‌,ಅನಿಲ್‌,ಅಜಯ್‌,ಲೋಕೇಶ್‌,ಚಂದನ, ವಿನಯ್‌, ನರೇಶ್‌, ಯಶವಂತ, ಜನಪರಮಂಜು, ಶಿವು ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.