ಹೊಸಕೋಟೆ: ಭಾರತ ದೇಶ ಕಂಡ ಅತ್ಯುತ್ತಮ ಪ್ರಧಾನಿಗಳಲ್ಲಿ ಮೋದಿಯವರದ್ದು ಅಗ್ರಸ್ಥಾನ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ. ನಾಗರಾಜ್ ಹೇಳಿದರು.
ಅವರು ನರೆಂದ್ರ ಮೋದಿ ಅವರ 70ನೇ ಜನ್ಮದಿನಾಚರಣೆ ಪ್ರಯುಕ್ತ ನಗರ ಯುವ ಮೋರ್ಚಾ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಮೋದಿಯವರು ಪ್ರಾಮಾಣಿಕವಾಗಿ. ಯಾವುದೇ ಆಸೆ ಅಮಿಷಗಳಿಲ್ಲದೆ ಈ ದೇಶಕ್ಕಾಗಿ ಕೆಲಸಮಾಡುತ್ತಿದ್ದಾರೆ. ಅಂತಹ ನಿಷ್ಠಾವಂತ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಪಡೆದಿರುವ ನಾವು ಅವರ ಬಗ್ಗೆ ಹೆಮ್ಮೆ ಪಡಬೇಕಾಗಿದೆ’ ಎಂದರು.
‘ಪ್ರಧಾನಿಯವರ ಹುಟ್ಟುಹಬ್ಬದ ಪ್ರಯುಕ್ತ ಆರು ದಿನಗಳ ಕಾಲ ಸೇವಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಪ್ರತಿದಿನ ವಿವಿಧ ಮೋರ್ಚಾಗಳಿಂದ ತಾಲ್ಲೂಕಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.
ಗಿಡನೆಡುವ ಕಾರ್ಯಕ್ರಮ: ನಗರದ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಬಳಿ ಮೋದಿಯವರ ಜನ್ಮ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಬಿಜೆಪಿ ನಗರ ಘಟಕದ ಆದ್ಯಕ್ಷ ಸಿ. ಜಯರಾಜ್ ರಾಜ್ಯ ಯುವಮೋರ್ಚಾ ಅಧ್ಯಕ್ಷ ಡಾ.ಸಂದೀಪ್ ಇದ್ದರು.
ನಗರದ ವಿವಿಧೆಡೆ ಸ್ವಚ್ಛತೆ, ಸಂತೆಗೆ ಮರುಚಾಲನೆ ಕಾರ್ಯಕ್ರಮ ನಡೆದವು. ಕಾರ್ಯಕ್ರಮದಲ್ಲಿ ನಗರ ಯುವ ಮೋರ್ಚಾ ಅದ್ಯಕ್ಷ ಸಂದೀಪ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿನೋದ್ ರೆಡ್ಡಿ, ಮುಖಂಡರಾದ ಅಶೋಕ್ (ಗುಳ್ಳು), ನಗರಸಭಾ ಸದಸ್ಯರಾದ ನಿತಿನ್ ಶ್ರೀನಿವಾಸ್, ನವೀನ್, ಆಶಾ ಚಂದ್ರಶೇಖರ್, ಟೌನ್ ಬ್ಯಾಂಕ್ ಅಧ್ಯಕ್ಷರಾದ ಕೃಷ್ಣಪ್ಪ, ಉಪಾಧ್ಯಕ್ಷರಾದ ಬಾಲಚಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.