ADVERTISEMENT

ಕೃಷಿ ಹೊಂಡದಲ್ಲಿ ಮುಳುಗಿ ತಾಯಿ–ಮಗ ಸಾವು

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2023, 22:30 IST
Last Updated 19 ಫೆಬ್ರುವರಿ 2023, 22:30 IST
   

ದೊಡ್ಡಬಳ್ಳಾಪುರ: ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಭಾನುವಾರ ಜಾನುವಾರು ಮೇಯಿಸುತ್ತಿದ್ದ ತಾಯಿ–ಮಗ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಕೋಳೂರು ಗ್ರಾಮದ ರೂಪಾ (35), ಅವರ ಮಗ ಹೇಮಂತ್ (9) ಮೃತಪಟ್ಟವರು.

ಫಾಲನೇತ್ರ ಎಂಬುವವರಿಗೆ ಸೇರಿರುವ ಕೃಷಿ ಹೊಂಡದ ಬದುವಿನ ಮೇಲೆ ಆಟವಾಡುತ್ತಿದ್ದ ಹೇಮಂತ್ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ಮಗನನ್ನು ರಕ್ಷಿಸಲು ಹೋದ ತಾಯಿ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಸ್ಥಳೀಯರು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT