ADVERTISEMENT

ಎಂ.ಟಿ.ಬಿ ನಾಗರಾಜ್ ಸೋಮವಾರ ಮತ್ತೆ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2019, 12:57 IST
Last Updated 17 ನವೆಂಬರ್ 2019, 12:57 IST

ಹೊಸಕೋಟೆ: ಎಂ.ಟಿ.ಬಿ. ನಾಗರಾಜ್ ಅವರು ನ. 18ರಂದು ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿಯಿಂದ ಅವರು ಈಗಾಗಲೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ್, ಇತರ ಬಿಜೆಪಿಯ ನಾಯಕರು ಹಾಗೂ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಮತ್ತು ಕಾಂಗ್ರೆಸ್ ಪಕ್ಷದ ಪದ್ಮಾವತಿ ಸುರೇಶ್ ನಾಮಪತ್ರ ಸಲ್ಲಿಕೆಯ ವೇಳೆ ಶಕ್ತಿ ಪ್ರದರ್ಶನ ನಡೆಸಿದ್ದು, ಈಗ ನಾಗರಾಜ್ ತಮ್ಮ ಶಕ್ತಿ ತೋರಿಸಲು ಸಿದ್ಧತೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.