ADVERTISEMENT

ದೊಡ್ಡಬಳ್ಳಾಪುರ: ರಾಷ್ಟ್ರೀಯ ಕೈಮಗ್ಗ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 4:40 IST
Last Updated 8 ಆಗಸ್ಟ್ 2021, 4:40 IST
ಬಿಜೆಪಿ ಮುಖಂಡರಾದ ರಾಜಲಕ್ಷ್ಮೀ ಅವರನ್ನು ಅಭಿನಂದಿಸಲಾಯಿತು
ಬಿಜೆಪಿ ಮುಖಂಡರಾದ ರಾಜಲಕ್ಷ್ಮೀ ಅವರನ್ನು ಅಭಿನಂದಿಸಲಾಯಿತು   

ದೊಡ್ಡಬಳ್ಳಾಪುರ: ನೇಕಾರರ ಬಳಿ ಸೀರೆ ಖರೀದಿಸಿ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸುವ ಮೂಲಕ ಬಿಜೆಪಿ ಮಹಿಳಾ ಮೋರ್ಚಾ ನಗರ ಘಟಕದ ಪದಾಧಿಕಾರಿಗಳು ರಾಷ್ಟ್ರೀಯ ಕೈಮಗ್ಗ ದಿನವನ್ನು ವಿನೂತನವಾಗಿ ಆಚರಿಸಿದರು.

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಖರೀದಿಸಿದ ಸೀರೆಯನ್ನು ಕಾರ್ಯಕರ್ತರಾದ ರಾಜಲಕ್ಷ್ಮೀ ಅವರಿಗೆ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಮೇಶ್, ನಗರ ಪ್ರಧಾನ ಕಾರ್ಯದರ್ಶಿ ಸುಶೀಲಾ ರಾಘವ, ಪ್ರಧಾನ ಕಾರ್ಯದರ್ಶಿ ನಯನಾ ರಘುನಂದನ್, ಮುಖಂಡರಾದ ಶ್ರೀದೇವಿ, ಮಾಲಾ, ಚೈತ್ರಾ, ಉಮಾ ಮಹೇಶ್ವರಿ, ಗಿರಿಜಾ, ದಾಕ್ಷಾಯಿಣಿ, ವಾಣಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.