ADVERTISEMENT

ಡ್ರಗ್ಸ್‌ ಜಾಲ ನಿಗ್ರಹಕ್ಕೆ ಮೊದಲ ಆದ್ಯತೆ: ಎಸ್‌ಪಿ ವಂಶಿ ಕೃಷ್ಣ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 3:31 IST
Last Updated 17 ಜುಲೈ 2021, 3:31 IST
ಎಸ್ಪಿ ಡಾ.ಕೋನ ವಂಶಿ ಕೃಷ್ಣ ಮಾತನಾಡಿದರು. ಚಿತ್ರದಲ್ಲಿ ಡಿವೈಎಸ್ಪಿ ಜಗದೀಶ್ ಇದ್ದಾರೆ.
ಎಸ್ಪಿ ಡಾ.ಕೋನ ವಂಶಿ ಕೃಷ್ಣ ಮಾತನಾಡಿದರು. ಚಿತ್ರದಲ್ಲಿ ಡಿವೈಎಸ್ಪಿ ಜಗದೀಶ್ ಇದ್ದಾರೆ.   

ನೆಲಮಂಗಲ: ‘ಮಾದಕ ವ್ಯಸನದಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಾದಕ ವಸ್ತುಗಳ ಸರಬರಾಜು ಜಾಲ ಮತ್ತು ಅದರ ಕಿಂಗ್‌ಪಿನ್‌ಗಳನ್ನು ಪತ್ತೆಹಚ್ಚಲು ಆದ್ಯತೆ ನೀಡಲಾಗುವುದು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನ ವಂಶಿ ಕೃಷ್ಣ ತಿಳಿಸಿದರು.

ನೆಲಮಂಗಲ ಉಪವಿಭಾಗದ ಪೊಲೀಸರು ಪತ್ತೆ ಹಚ್ಚಿದ ವಿವಿಧ ಅಪರಾಧ ಪ್ರಕರಣಗಳ ಸಂಬಂಧಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಶೀಘ್ರದಲ್ಲೇ ಕಾಲ್ನಡಿಗೆ ಗಸ್ತನ್ನು ಪ್ರಾರಂಭಿಸಲಾಗುವುದು. ಸಾರ್ವಜನಿಕರ ಸುರಕ್ಷತೆಗಾಗಿ ಹೆಚ್ಚು ಜನ ಸಂದಣಿಯಾಗುವ ಮಳಿಗೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯ. ಸದಾ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಸಾರ್ವಜನಿಕರೊಂದಿಗೆ ಮೃದುವಾಗಿ ಮಾತನಾಡಲು ಕೌಶಲ ತರಬೇತಿ ನೀಡಲಾಗುತ್ತಿದೆ’ ಎಂದರು.

ADVERTISEMENT

‘ಒಂದು ತಿಂಗಳಲ್ಲಿ 10 ಅಪರಾಧ ಪ್ರಕರಣಗಳಿಂದ ಅಂತರರಾಜ್ಯ ಆರೋಪಿಗಳು ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದೆ. ₹19.13 ಲಕ್ಷ ಬೆಲೆ ಬಾಳುವ 490 ಗ್ರಾಂ ಚಿನ್ನಾಭರಣ, ಮೀನು ಪೆಟ್ಟಿಗೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹3 ಲಕ್ಷ ಮೌಲ್ಯದ 12 ಕೆ.ಜಿ. ಗಾಂಜಾ, ₹4.61 ಲಕ್ಷ ನಗದು ಸೇರಿದಂತೆ ಒಟ್ಟು ₹26.74 ಲಕ್ಷ ಮೌಲ್ಯದ ಮಾಲು ಜಪ್ತಿ ಮಾಡಲಾಗಿದೆ’ ಎಂದರು.

ಪೊಲೀಸ್ ಅಧಿಕಾರಿಗಳಾದ ಜಗದೀಶ್, ಎ.ವಿ.ಕುಮಾರ್, ಹರೀಶ್, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.