ADVERTISEMENT

ನರೇಗಾ: ನಿಯಮಗಳ ಉಲ್ಲಂಘನೆ ದೂರು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 2:23 IST
Last Updated 7 ಸೆಪ್ಟೆಂಬರ್ 2020, 2:23 IST
ಟಿ.ಹೊಸಳ್ಳಿ ಗ್ರಾಮ ಪಂಚಾಯಿಯಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ಕಮಲಮ್ಮ ಮಾತನಾಡಿದರು
ಟಿ.ಹೊಸಳ್ಳಿ ಗ್ರಾಮ ಪಂಚಾಯಿಯಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ಕಮಲಮ್ಮ ಮಾತನಾಡಿದರು   

ಕನಕಪುರ: ನರೇಗಾ ಯೋಜನೆ ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ನಿಯಮ ಪಾಲಿಸುವಂತೆ ಸೂಚನೆ ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಪ್ಪುಗಳು ಪುನರಾವರ್ತನೆ ಆಗುತ್ತಿವೆ ಎಂದು ಸಾಮಾಜಿಕ ಲೆಕ್ಕ ಪರಿಶೋಧನಾ ಅಧಿಕಾರಿ ಕಮಲಪ್ಪ ಆರೋಪಿಸಿದರು.

ತಾಲ್ಲೂಕಿನ ಮರಳವಾಡಿ ಹೋಬಳಿ ಟಿ.ಹೊಸಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ 2019-20ನೇ ಸಾಲಿನ ಎರಡನೇ ಅವಧಿ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ವರದಿ ಮಂಡಿಸಿ ಮಾತನಾಡಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ಉಪಯೋಗಕ್ಕೆ ಬಾರದ 31 ದನದ ಕೊಟ್ಟಿಗೆ ನಿರ್ಮಾಣ ಮಾಡಲಾಗಿದೆ. ಅವುಗಳಲ್ಲಿ ಹಣ ಪಡೆದ ಮೇಲೆ 3 ಕೊಟ್ಟಿಗೆ ಒಡೆದು ಹಾಕಲಾಗಿದೆ. ಭಾವಚಿತ್ರವೇ ಇಲ್ಲದ ಅನೇಕ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ದೂರಿದರು.

ADVERTISEMENT

ಪಂಚಾಯಿತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಆಗಿರುವ ಲೋಪದೋಷ ಇನ್ನು 15 ದಿನಗಳ ಒಳಗಾಗಿ ಸರಿಪಡಿಸಿ ವರದಿ ನೀಡಬೇಕೆಂದು ಸೂಚಿಸಿದರು.

ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಕುಮಾರ್‌ ಮಾತನಾಡಿ, ರಾಸುಗಳಿಗೆ ಹರಡಿರುವ ರೋಗ ನಿವಾರಿಸುವತ್ತ ಕ್ರಮ ವಹಿಸಬೇಕಾಗಿದೆ ಎಂದು ತಿಳಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ರಾಮಯ್ಯ, ಗ್ರಾಮದ ಮುಖಂಡರು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.