ಕುಂದಾಣ (ದೇವನಹಳ್ಳಿ ತಾಲ್ಲೂಕು): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ,ಎಸ್ಸಿ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಎಂ.ಲಿಬ್.ಐ,ಎಸ್ಸಿ, ಪಿಜಿ ಸರ್ಟಿಫಿಕೇಟ್, ಡಿಪ್ಲೊಮಾ ಮತ್ತು ಯುಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಚಾಮರಾಜಪೇಟೆಯಲ್ಲಿರುವ ಬೆಂಗಳೂರು ಪ್ರಾದೇಶಿಕ ಕೇಂದ್ರ 1ರಲ್ಲಿ ಆನ್ಲೈನ್ ಮೂಲಕ ಪ್ರವೇಶಾತಿ ಪ್ರಾರಂಭವಾಗಿದೆ. ಆಸಕ್ತರು ಪ್ರವೇಶಾತಿ ಪಡೆಯ
ಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್ಸೈಟ್ www.ksoumysuru.ac.in ಅಥವಾ ದೂರವಾಣಿ ಸಂಖ್ಯೆ 080-26603664, ಮೊಬೈಲ್ 98449 65515 ಸಂಪರ್ಕಿಸಬಹುದಾಗಿದೆ ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.