ADVERTISEMENT

ದೊಡ್ಡಬಳ್ಳಾಪುರ: ಲಯನ್ಸ್ ಕ್ಲಬ್‌ನಿಂದ ವಿಶ್ವ ಶಾಂತಿಗಾಗಿ ಚಿತ್ರಕಲಾ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 4:02 IST
Last Updated 1 ನವೆಂಬರ್ 2021, 4:02 IST
ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್‌ನಿಂದ ನಡೆದ ವಿಶ್ವ ಶಾಂತಿಗಾಗಿ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು
ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್‌ನಿಂದ ನಡೆದ ವಿಶ್ವ ಶಾಂತಿಗಾಗಿ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು   

ದೊಡ್ಡಬಳ್ಳಾಪುರ:ನಗರದ ಲಯನ್ಸ್ ಕ್ಲಬ್‌ನಿಂದ ವಿಶ್ವ ಶಾಂತಿಗಾಗಿ ನಗರದ ಲಯನ್ಸ್ ಭವನದಲ್ಲಿಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.

ಕ್ಲಬ್‍ನ ಜಿಲ್ಲಾ ಪೀಸ್ ಪೋಸ್ಟರ್‌ನ ಡಿ.ಸಿ ಲಯನ್ ಸಾ.ಶ. ಕುಲೋತ್ತುಂಗನ್ ಮಾತನಾಡಿ, ಈ ಜಗತ್ತು ನೆಮ್ಮದಿಯಿಂದ ಬಾಳಬೇಕಾದರೆ ಶಾಂತಿ ಮುಖ್ಯವಾಗಿದೆ. ಮಕ್ಕಳಿಗೆ ಶಾಂತಿ, ಸೌಹಾರ್ದ, ಬಾಂಧವ್ಯದ ಗುಣಗಳನ್ನು ಕಲಿಸಬೇಕಿದೆ ಎಂದರು.

ವಿಶ್ವಶಾಂತಿಗಾಗಿ ಚಿತ್ರಕಲಾ ಸ್ಪರ್ಧೆಯಲ್ಲಿ ನಾವು ಸಂಪರ್ಕ ಹೊಂದಿದ್ದೇವೆ ಎನ್ನುವುದು ಈ ಬಾರಿಯ ಧ್ಯೇಯ ವಾಕ್ಯವಾಗಿದೆ ಎಂದು ಹೇಳಿದರು.

ADVERTISEMENT

ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಜಿ. ಗೋಪಾಲ್ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆ.ವಿ. ಪ್ರಭುಸ್ವಾಮಿ, ಲಯನ್ಸ್ ಕ್ಲಬ್ ಕಾಯದರ್ಶಿ ಕೆ. ಶಿವಶಂಕರ್, ಖಜಾಂಚಿ ಮಂಗಳಗೌರಿ ಪರ್ವತಯ್ಯ, ಸಹ ಕಾರ್ಯದರ್ಶಿ ರೇಖಾ ವೆಂಕಟೇಶ್, ಪೀಸ್ ಪೋಸ್ಟರ್‌ ಮುಖ್ಯಸ್ಥೆ ರಾಧಿಕಾ ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.