ADVERTISEMENT

ವಾಹನ ಪೊಲೀಸ್‌ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2019, 13:48 IST
Last Updated 9 ಜೂನ್ 2019, 13:48 IST
ವಿಜಯಪುರದಲ್ಲಿ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಸರಕು ಸಾಗಾಣಿಕೆ ವಾಹನವನ್ನು ಪೊಲೀಸರು ವಶಕ್ಕೆ ಪಡೆದರು
ವಿಜಯಪುರದಲ್ಲಿ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಸರಕು ಸಾಗಾಣಿಕೆ ವಾಹನವನ್ನು ಪೊಲೀಸರು ವಶಕ್ಕೆ ಪಡೆದರು   

ವಿಜಯಪುರ: ಸರಕು ಸಾಗಾಣಿಕೆ ವಾಹನಗಳಲ್ಲಿ ಜನರನ್ನು ಸಾಗಾಣಿಕೆ ಮಾಡುವುದು ಅಪರಾಧ ಎಂದು ಜಾಗೃತಿ ಮೂಡಿಸುತ್ತಿದ್ದರೂ ಕೆಲ ವಾಹನಗಳ ಚಾಲಕರು ಅಂಥ ವಾಹನಗಳಲ್ಲಿ ಜನರನ್ನು ತುಂಬಿಕೊಂಡು ಹೋಗುತ್ತಿದ್ದಾರೆ. ಅಂತಹವರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಸಬ್‌ ಇನ್‌ಸ್ಪೆಕ್ಟರ್ ನರೇಶ್‌ ನಾಯಕ್ ತಿಳಿಸಿದ್ದಾರೆ.

ದ್ರಾಕ್ಷಿ ಕಟಾವು ಮಾಡಲು ಟೆಂಪೊಗಳಲ್ಲಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುವುದು, ಕ್ಯಾರೆಟ್ ಮೂಟೆಗಳ ಮೇಲೆ ಕಾರ್ಮಿಕರನ್ನು ಕೂರಿಸಿಕೊಂಡು ಹೋಗುವುದು, ಟಾಟಾ ಏಸ್‌ಗಳಲ್ಲಿ ಜನರನ್ನು ಕರೆದುಕೊಂಡು ಹೋಗುವುದನ್ನು ನಿಷೇಧ ಮಾಡಲಾಗಿದೆ. ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದರೆ ಅಂತಹ ವಾಹನಗಳ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ವಾಹನ ಚಾಲನಾ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದರು.

ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗಲು ಪ್ರತ್ಯೇಕವಾದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಕಾರ್ಮಿಕರೂ ಕೂಡಾ ಕೂಲಿ ಆಸೆಗಾಗಿ ಪ್ರಾಣಗಳನ್ನು ಲೆಕ್ಕಿಸದೆ ಟೆಂಪೋಗಳ ಮೇಲೆ ಪ್ರಯಾಣಿಸುತ್ತಾರೆ. ಆಕಸ್ಮಾತ್ ಏನಾದರೂ ಅಪಾಯ ಸಂಭವಿಸಿದರೆ ಕುಟುಂಬಗಳಲ್ಲಿ ಅವರ ಮೇಲೆ ಅವಲಂಬಿತರಾಗಿರುವವರು ಅನಾಥರಾಗುತ್ತಾರೆ. ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.