ADVERTISEMENT

ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 13:47 IST
Last Updated 3 ಜೂನ್ 2019, 13:47 IST
ಸಂಸದರಾಗಿ ಬೆಂಡಿಗಾನಹಳ್ಳಿ ಸ್ವಗ್ರಾಮಕ್ಕೆ ಆಗಮಿಸಿದ ಬಿ.ಎನ್.ಬಚ್ಚೇಗೌಡ ಅವರಿಗೆ ಗ್ರಾಮದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು
ಸಂಸದರಾಗಿ ಬೆಂಡಿಗಾನಹಳ್ಳಿ ಸ್ವಗ್ರಾಮಕ್ಕೆ ಆಗಮಿಸಿದ ಬಿ.ಎನ್.ಬಚ್ಚೇಗೌಡ ಅವರಿಗೆ ಗ್ರಾಮದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು   

ಸೂಲಿಬೆಲೆ: ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಸಂಸದ ಬಿ.ಎನ್‌. ಬಚ್ಚೇಗೌಡ ಹೇಳಿದರು.

ಹೊಸಕೋಟೆ ತಾಲ್ಲೂಕಿನ ಬೆಂಡಿಗಾನಹಳ್ಳಿಗೆ ಸಂಸದರಾದ ಬಳಿಕ ಮೊದಲ ಭೇಟಿ ನೀಡಿ, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ಧ: ಕ್ಷೇತ್ರದ ಸರ್ವಜನರ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯ ಇಲ್ಲ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ಸಭೆ ಕರೆಯಲಾಗಿದೆ. ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಚರ್ಚಿಸಲಾಗುವುದು. ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಅಗತ್ಯ ಕಾಮಗಾರಿಗಳನ್ನು ಬಗ್ಗೆ ಶೀಘ್ರ ಕೈಗೊಳ್ಳಲಾಗುವುದು ಎಂದರು.

ADVERTISEMENT

‘ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಎಲ್ಲ ಸಮುದಾಯದವರು ನನ್ನ ಕೈಹಿಡಿದಿದ್ದಾರೆ. ವಿಶೇಷವಾಗಿ ಅಲ್ಪಸಂಖ್ಯಾತರೂ ನನಗೆ ಆಶೀರ್ವಾದ ಮಾಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.