ADVERTISEMENT

ಧರಣಿ ಸ್ಥಳಕ್ಕೆ ಭೇಟಿ: ಸಚಿವ ಆರ್.ಅಶೋಕ್ ಭರವಸೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2020, 8:47 IST
Last Updated 10 ಮಾರ್ಚ್ 2020, 8:47 IST
ಕಸ ಸುರಿಯುವುದನ್ನು ವಿರೋಧಿಸಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಸತ್ಯಾಗ್ರಹ.
ಕಸ ಸುರಿಯುವುದನ್ನು ವಿರೋಧಿಸಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಸತ್ಯಾಗ್ರಹ.   

ದೊಡ್ಡಬಳ್ಳಾಪುರ: ತಾಲ್ಲೂಕಿಗೆ ಬಿಬಿಎಂಪಿ ಕಸ ತಂದು ಸುರಿಯುತ್ತಿರುವುದನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಮಂಗಳವಾರ ವಿಧಾನ ಸಭೆಯಲ್ಲಿ ಸದ್ದು ಮಾಡಿದೆ.

ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಅವರು ಇಲ್ಲಿನ ಕಸದ ಸಮಸ್ಯೆ ಕುರಿತು ವಿವರವಾಗಿ ಸಭಾಧ್ಯಕ್ಷರ ಗಮನಕ್ಕೆ ತಂದರು.

ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಸಂಜೆ ವೇಳೆಗೆ ಧರಣಿ ಸ್ಥಳಕ್ಕೆ ಹಾಗೂ ಕಸ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಧರಣಿಯಲ್ಲಿ ಎಲೆರಾಂಪುರದ ಕುಂಚಿಟಿಗರ ಮಠದ ಡಾ.ಹನುಮಂತನಾಥ ಸ್ವಾಮೀಜಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು,ಪತ್ರಕರ್ತರ ಸಂಘ, ಕನ್ನಡಪರ ಸಂಘಟನೆಗಳವರು ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.