ದೊಡ್ಡಬಳ್ಳಾಪುರ: ತಾಲ್ಲೂಕಿನ ಮಂಗಳವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಆವಲಯ್ಯನಪಾಳ್ಯ ಗ್ರಾಮದಲ್ಲಿ ನಿರ್ಮಿಸಿದ್ದ ಪಾಲಿಹೌಸ್ ಹಾನಿಗೀಡಾಗಿದೆ.
ಸುಮಾರು ಒಂದು ಗಂಟೆ ಕಾಲ ಬೀಸಿದ ಗಾಳಿ ಮಳೆಯಿಂದಾಗಿ ಆವಲಯ್ಯನಪಾಳ್ಯ ಗ್ರಾಮದ ವಸಂತಮ್ಮ ಗುರುಮೂರ್ತಿ ಎಂಬುವರು ಸುಮಾರು 1 ಎಕರೆ ಜಮೀನಿನಲ್ಲಿ ₹40 ಲಕ್ಷ ಬ್ಯಾಂಕ್ ಸಾಲ ಪಡೆದು ನಿರ್ಮಿಸಿದ್ದ ಪಾಲಿಹೌಸ್ನ ಮೇಲ್ಭಾಗ ಸಂಪೂರ್ಣವಾಗಿ ಹಾರಿಹೋಗಿದೆ. ಅಲ್ಲದೆ ಪಾಲಿಹೌಸ್ ನಿರ್ಮಾಣಕ್ಕೆ ಬಳಸಿದ್ದ ಕಬ್ಬಿಣದ ಸರಳು, ಪಾಲಿ ಪೇಪರ್ ಭಾಗಶಃ ಹಾಳಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.