ದೊಡ್ಡಬಳ್ಳಾಪುರ: ನಗರದಲ್ಲಿ ಮುಸ್ಲಿಮರು ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು.
ನಗರದ ಶಾಂತಿನಗರದ ಸಿಕಂದರ್ ಶಾ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಈದ್ ಉಲ್ ಫ್ರಿತ್ ಪ್ರಾರ್ಥನೆಯಲ್ಲಿ ವಿವಿಧೆಡೆಗಳಿಂದ ಬಂದಿದ್ದ ಸಾವಿರಾರು ಮಂದಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಗುರುಗಳಾದ ಖಲೀಂ ಉಲ್ಲಾ ಪ್ರಾರ್ಥನೆ ಹಾಗೂ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದರು.
ತಾಲ್ಲೂಕಿನ ತೂಬಗೆರೆ, ದೊಡ್ಡಬೆಳವಂಗಲ ಹಾಗೂ ಪಾಲನಜೋಗಹಳ್ಳಿಯ ಮಸೀದಿಗಳಲ್ಲೂ ಈದ್ ಉಲ್ ಫ್ರಿತ್ ಪ್ರಾರ್ಥನೆಗಳು ನಡೆದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.