ADVERTISEMENT

‘ಸವಾಲು ಎದುರಿಸಲು ಸಜ್ಜಾಗಿ’

ಆರ್‌.ಎಲ್‌. ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಘಟಿಕೋತ್ಸವ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 2:59 IST
Last Updated 2 ಆಗಸ್ಟ್ 2021, 2:59 IST
ದೊಡ್ಡಬಳ್ಳಾಪುರದ ಆರ್‌.ಎಲ್‌. ಜಾಲಪ್ಪ ತಾಂತ್ರಿಕ ಕಾಲೇಜಿನಲ್ಲಿ ನಡೆದ ಘಟಿಕೋತ್ಸವವನ್ನು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ.ಶಿವಕುಮಾರ್ ಉದ್ಘಾಟಿಸಿದರು
ದೊಡ್ಡಬಳ್ಳಾಪುರದ ಆರ್‌.ಎಲ್‌. ಜಾಲಪ್ಪ ತಾಂತ್ರಿಕ ಕಾಲೇಜಿನಲ್ಲಿ ನಡೆದ ಘಟಿಕೋತ್ಸವವನ್ನು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ.ಶಿವಕುಮಾರ್ ಉದ್ಘಾಟಿಸಿದರು   

ದೊಡ್ಡಬಳ್ಳಾಪುರ: ಜಾಗತಿಕ ಸವಾಲು ಎದುರಿಸಲು ವಿದ್ಯಾರ್ಥಿಗಳು ಸಜ್ಜಾಗಬೇಕಿದ್ದು, ತಂತ್ರಜ್ಞಾನದ ಆವಿಷ್ಕಾರಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿ ಡಾ.ಶಿವಕುಮಾರ್ ಹೇಳಿದರು.

ನಗರದ ಆರ್.ಎಲ್. ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಇಂದು ವಿಜ್ಞಾನ ಮುನ್ನಡೆ ಸಾಧಿಸುತ್ತಿದ್ದು, ಹಲವಾರು ಸಂಶೋಧನೆಗಳು ನಡೆಯುತ್ತಿವೆ. ಪದವಿ ಪಡೆದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹೊಣೆಗಾರಿಕೆ ಹೆಚ್ಚಾಗಿದೆ. ವಿಜ್ಞಾನದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖವಾಗಬೇಕಿದೆ ಎಂದು
ಹೇಳಿದರು.

ADVERTISEMENT

ಕಾರ್ಯಕ್ರಮದಲ್ಲಿ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ನಿರ್ದೇಶಕ ಜೆ. ರಾಜೇಂದ್ರ, ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಬಾಬುರೆಡ್ಡಿ, ಪ್ರಾಂಶುಪಾಲ ಡಾ.ಎಂ. ಶ್ರೀನಿವಾಸರೆಡ್ಡಿ, ಉಪ ಪ್ರಾಂಶುಪಾಲ ಡಾ.ಶಿವಪ್ರಸಾದ್, ಸ್ಟೂಡೆಂಟ್ ವೆಲ್‌ಫೇರ್ ಆಫೀಸರ್ ಡಾ.ಕೆ. ಸುನಿಲ್‌ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.