ADVERTISEMENT

ಅರ್ಚಕರ ಸಂಘದ ಕ್ಯಾಲೆಂಡರ್ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 13:17 IST
Last Updated 9 ಜನವರಿ 2019, 13:17 IST
ಅರ್ಚಕರ ಆಗಮಿಕರ ಸಂಘದ ಕ್ಯಾಲೆಂಡರ್ ಅನ್ನು ತಹಶೀಲ್ದಾರ್ ಬಿ.ಎ.ಮೋಹನ್ ಬಿಡುಗಡೆ ಮಾಡಿದರು
ಅರ್ಚಕರ ಆಗಮಿಕರ ಸಂಘದ ಕ್ಯಾಲೆಂಡರ್ ಅನ್ನು ತಹಶೀಲ್ದಾರ್ ಬಿ.ಎ.ಮೋಹನ್ ಬಿಡುಗಡೆ ಮಾಡಿದರು   

ದೊಡ್ಡಬಳ್ಳಾಪುರ: ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಸಂಘದ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ನಗರದ ಸೋಮೇಶ್ವರ ದೇವಾಲಯದಲ್ಲಿ ನಡೆಯಿತು.

ತಹಶೀಲ್ದಾರ್ ಬಿ.ಎ.ಮೋಹನ್ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ, ‘ಲೋಕಲ್ಯಾಣವನ್ನು ಬಯಸುವ ಆಗಮಿಕರು ಸಂಘಟನಾತ್ಮಕವಾಗಿ ಒಂದಾಗುವುದು ಉತ್ತಮ ಬೆಳವಣಿಗೆ. ತಸ್ತಿಕ್ ವಿಳಂಬ ಸೇರಿದಂತೆ ಆಗಮಿಕರ ಮನವಿಗಳನ್ನು ಪುರಸ್ಕರಿಸಿ ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಕ್ರಮ ಕೈಗೊಳ್ಳುವೆ’ ಎಂದು ತಿಳಿಸಿದರು.

ತಾಲ್ಲೂಕಿನ ಮುಜರಾಯಿ ದೇವಾಲಯಗಳ ಅರ್ಚಕರ ಮಕ್ಕಳ ಆಗಮ ವೇದ ಅಧ್ಯಯನ ತರಗತಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಸೋಮೇಶ್ವರ ದೇವಾಲಯದ ಹಿಂಭಾಗದ ಕೊಠಡಿಯನ್ನು ತಹಶೀಲ್ದಾರ್ ಸಮಕ್ಷಮದಲ್ಲಿ ಅರ್ಚಕರ ಸಂಘಕ್ಕೆ ನೀಡಲಾಯಿತು. ಈ ಸಂಬಂಧ ಕೊಠಡಿಯ ಬೀಗದ ಕೈ ಹಸ್ತಾಂತರಿಸಲಾಯಿತು.

ADVERTISEMENT

ಸೋಮೇಶ್ವರ ದೇವಾಲಯದ ಅಭಿವೃದ್ಧಿ ಸಮಿತಿಯ ಜಿ.ಎಸ್.ಉಮಾಶಂಕರ್, ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಸಂಘದ ಗೌರವಾಧ್ಯಕ್ಷ ಶ್ರೀನಿವಾಸ ರಾಘವನ್, ಅಧ್ಯಕ್ಷ ಕೆ.ವಿ.ಸುರೇಶ್ ಮೂರ್ತಿ, ಉಪಾಧ್ಯಕ್ಷ ವೇದಮೂರ್ತಿ, ಟಿ.ಎಸ್.ಸೋಮಶೇಖರ್ ಆರಾಧ್ಯ ಶಾಸ್ತ್ರಿ ಹಾಗೂ ಸಂಘದ ಪದಾಧಿಕಾರಿಗಳು ಅರ್ಚಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.