ದೊಡ್ಡಬಳ್ಳಾಪುರ: ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಜಯರಾಂ ಸೋಮವಾರ ರಾಜೀನಾಮೆ ಸಲ್ಲಿಸಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ ಅವರು, ಪಕ್ಷದ ವರಿಷ್ಠರು ನೀಡಿದ ಅವಧಿಯಲ್ಲಿ ತಾಲ್ಲೂಕಿನ ಅಭಿವೃದ್ಧಿಗೆ ಸಾಧ್ಯವಾದಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದರು.
ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲು ಅವಕಾಶ ನೀಡಿ ಸಲಹೆ, ಸಹಕಾರ ನೀಡಿದ ಶಾಸಕ ಟಿ.ವೆಂಕಟರಮಣಯ್ಯ, ಕಾಂಗ್ರೆಸ್ ಹಿರಿಯ ಮುಖಂಡ ಆರ್.ಜಿ.ವೆಂಕಟಾಚಲಯ್ಯ, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ಕುಮಾರ್ ಹಾಗೂ ಸದಸ್ಯರಿಗೆ ಧನ್ಯವಾದ ತಿಳಿಸಿದರು.
ಪಕ್ಷದ ಹೈಕಮಾಂಡ್ ನಿಲುವಿಗೆ ಬದ್ದರಾಗಿ ರತ್ನಮ್ಮ ಜಯರಾಂ ರಾಜೀನಾಮೆ ಸಲ್ಲಿಸಿದ್ದು, ತಾಲ್ಲೂಕು ಪಂಚಾಯಿತಿ ಸದಸ್ಯ ನಾರಾಯಣಗೌಡ ಅಧ್ಯಕ್ಷರಾಗುವ ಸಾಧ್ಯತೆ ಇದೆ. ತಾಲ್ಲೂಕು ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಇನ್ನು ಆರು ತಿಂಗಳು ಮಾತ್ರ ಬಾಕಿ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.