ADVERTISEMENT

ರಥೋತ್ಸವ ಮೆರವಣಿಗೆಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 4:37 IST
Last Updated 25 ಫೆಬ್ರುವರಿ 2021, 4:37 IST
ರಥೋತ್ಸವದ ಅಂಗವಾಗಿ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಲಾಯಿತು
ರಥೋತ್ಸವದ ಅಂಗವಾಗಿ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಲಾಯಿತು   

ದೇವನಹಳ್ಳಿ: ಐತಿಹಾಸಿಕ ಕೋಟೆ ಶ್ರೀವೇಣುಗೋಪಾಲ ಸ್ವಾಮಿಯ ರಥೋತ್ಸವ ಮೆರವಣಿಗೆ ಈ ಬಾರಿ ಇರುವುದಿಲ್ಲ. ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತಗೊಳಿಸಲಾಗಿದೆ ಎಂದು ತಹಶೀಲ್ದಾರ್ ಅನಿಲ್ ಕುಮಾರ್ ಹೇಳಿದರು.

ಇಲ್ಲಿನ ತಾಲ್ಲೂಕು ಆಡಳಿತ ಕಚೇರಿಯಲ್ಲಿ ರಥೋತ್ಸವ ಕುರಿತು ಮಾಹಿತಿ ನೀಡಿದರು.

ರಾಜ್ಯದಲ್ಲಿ ಕೊವಿಡ್ ಸೋಂಕಿನ ಎರಡನೇ ಅಲೆ ಹೆಚ್ಚುತ್ತಿದೆ. ಸರ್ಕಾರದ ನಿರ್ದೇಶನದಂತೆ ರಥೋತ್ಸವಕ್ಕೆ ಚಾಲನೆ ನೀಡಲಾಗುವುದು. ಆದರೆ, ಮೆರವಣಿಗೆ ನಡೆಸಲು ಅವಕಾಶವಿಲ್ಲ. 50ಕ್ಕಿಂತ ಹೆಚ್ಚು ಭಕ್ತರು ಪಾಲ್ಗೊಳ್ಳುವಂತಿಲ್ಲ ಎಂದರು.

ADVERTISEMENT

ರಥದ ಬಿಡಿಭಾಗಗಳನ್ನು ಜೋಡಿಸಿ ವಸ್ತ್ರಾಲಂಕಾರ ಮತ್ತು ಹೂವಿನಿಂದ ಅಲಂಕರಿಸಿ ಫೆ. 27ರಂದು ಸಾಂಕೇತಿಕವಾಗಿ ಉತ್ಸವ ಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪಿಸಲಾಗುವುದು. ಆಭರಣಗಳಿಂದ ಅಲಂಕರಿಸಿ ವಿಧಿವಿಧಾನ ಪೂರೈಸಲಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.