ADVERTISEMENT

ಆನೇಕಲ್: ಅರ್ಹರಿಗೆ ಸೂರಿನ ಸೌಲಭ್ಯ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 6:08 IST
Last Updated 8 ಮಾರ್ಚ್ 2023, 6:08 IST
ಆನೇಕಲ್ ತಾಲ್ಲೂಕಿನ ಚಂದಾಪುರ ಸೂರ್ಯನಗರದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ನಡೆದ ವಾಣಿಜ್ಯ ಸಂಕೀರ್ಣ ಹಾಗೂ ಮಲ್ಟಿಪ್ಲೆಕ್ಸ್ ಕಟ್ಟಡ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ ಮಾತನಾಡಿದರು
ಆನೇಕಲ್ ತಾಲ್ಲೂಕಿನ ಚಂದಾಪುರ ಸೂರ್ಯನಗರದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ನಡೆದ ವಾಣಿಜ್ಯ ಸಂಕೀರ್ಣ ಹಾಗೂ ಮಲ್ಟಿಪ್ಲೆಕ್ಸ್ ಕಟ್ಟಡ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ ಮಾತನಾಡಿದರು   

ಆನೇಕಲ್: ತಾಲ್ಲೂಕಿನ ಚಂದಾಪುರದ ಸೂರ್ಯ ನಗರದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಗೃಹ ಮಂಡಳಿ ಕಚೇರಿ ಕಟ್ಟಡ, ವಾಣಿಜ್ಯ ಸಂಕೀರ್ಣ ಹಾಗೂ ಮಲ್ಟಿಪ್ಲೆಕ್ಸ್‌ ಕಟ್ಟಡ ನಿರ್ಮಾಣ ಕಾಮಗಾರಿಗೆ ವಸತಿ ಸಚಿವ ವಿ. ಸೋಮಣ್ಣ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಸೂರಿಲ್ಲದವರಿಗೆ ಸೂರು ನೀಡುವುದು ಗೃಹ ಮಂಡಳಿಯ ಗುರಿಯಾಗಿದೆ. ಮಂಡಳಿಯು ಲಾಭರಹಿತ ಸೇವಾ ಸಂಸ್ಥೆಯಾಗಿದೆ ಎಂದರು.

ನಿವೃತ್ತ ಐಎಎಸ್‌ ಅಧಿಕಾರಿ ಕೆ. ಶಿವರಾಮು, ಗೃಹ ಮಂಡಳಿ ಆಯುಕ್ತೆ ಕವಿತಾ ಮನ್ನಿಕೇರಿ, ಮುಖ್ಯ ಎಂಜಿನಿಯರ್ ಶರಣಪ್ಪ ಸುಲಗುಂಟೆ, ಕಾರ್ಯದರ್ಶಿ ಸಿದ್ದಲಿಂಗಪ್ಪ, ಎಂಜಿನಿಯರ್ ಲೋಕೇಶ್‌ಬಾಬು, ಜಗದೀಶ್, ಬೋಪಣ್ಣ, ಕೊಟ್ರೇಶ್, ಬಿಜೆಪಿ ಮಂಡಲ ಅಧ್ಯಕ್ಷ ಬಿ.ಬಿ.ಐ. ಮುನಿರೆಡ್ಡಿ, ಮುಖಂಡರಾದ ಕೆ. ಜಯಣ್ಣ, ಹಿನ್ನಕ್ಕಿ ಜಯಣ್ಣ, ನಾರಾಯಣಪ್ಪ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.