ಆನೇಕಲ್: ತಾಲ್ಲೂಕಿನ ಅರೇಹಳ್ಳಿ ಬಳಿ ಹೊಲವೊಂದರಲ್ಲಿ ರೌಡಿಶೀಟರ್ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ.
‘ಬಳ್ಳೂರು ಗ್ರಾಮದ ಶ್ರೀಕಾಂತ್ (26) ಹತ್ಯೆಯಾದವನು. ಬಳ್ಳೂರು ಗ್ರಾಮದ ಶ್ರೀಕಾಂತ್ ಅತ್ತಿಬೆಲೆಯಲ್ಲಿ ವಾಸವಾಗಿದ್ದ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಈ ವ್ಯಕ್ತಿಯ ವಿರುದ್ಧ ಹಲವಾರು ಪ್ರಕರಣಗಳಿವೆ. ಸೋಮವಾರ ಸಂಜೆ ನಾಲ್ಕೈದು ಮಂದಿ ಸ್ನೇಹಿತರೊಂದಿಗೆ ಮನೆಯಿಂದ ಹೊರಟ ಎನ್ನಲಾಗಿದ್ದು ಕುಡಿದ ಅಮಲಿನಲ್ಲಿ ಜಗಳವಾಡಿ ಹತ್ಯೆ ನಡೆಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.