ವಿಜಯಪುರ: ಪೂರ್ವ ಮುಂಗಾರು ಹಂಗಾಮು ಮುಗಿದಿದ್ದು, ರೈತರು ಬಿತ್ತನೆ ಕಾರ್ಯ ತಯಾರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ರಸಗೊಬ್ಬರಗಳ ಅಂಗಡಿಗಳಲ್ಲಿ ಕಡ್ಡಾಯವಾಗಿ ದರಪಟ್ಟಿ ಪ್ರದರ್ಶನ ಮಾಡಬೇಕು. ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಬಾರದು ಎಂದುಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರೇವಣ್ಣಸಿದ್ದಪ್ಪ ತಿಳಿಸಿದರು.
ನಿಗದಿಗಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಿದರೆ ಅಂತಹ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಲಾಗುವುದು. ರಸಗೊಬ್ಬರ ಖರೀದಿಸಿದಾಗ ಕಡ್ಡಾಯವಾಗಿ ಬಿಲ್ ಪಡೆಯಬೇಕು.ಅಂಗಡಿಗಳ ಬಳಿ ಕಡ್ಡಾಯವಾಗಿ ಸ್ಯಾನಿಟೈಸರ್ ಇಟ್ಟಿರಬೇಕು. ಮಾಸ್ಕ್ ಧರಿಸಿರಬೇಕು. ಅಂತರ ಕಾಪಾಡಿಕೊಳ್ಳಬೇಕು. ಹೆಚ್ಚು ಜನಸಂದಣಿ ಇರದಂತೆ ಗಮನಹರಿಸಬೇಕು ಎಂದು ವ್ಯಾಪಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.
ವಿಜಯಪುರದಲ್ಲಿ 10 ರಸಗೊಬ್ಬರ ಮಾರಾಟದ ಅಂಗಡಿಗಳು ವೆಂಕಟಗಿರಿಕೋಟೆಯಲ್ಲಿ ಒಂದು ಇದೆ. ರೈತರಿಗೆ ರಸಗೊಬ್ಬರ ಸಮಸ್ಯೆಯಾಗದಂತೆ ಗಮನಹರಿಸಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.