ದೊಡ್ಡಬಳ್ಳಾಪುರ:ಇಲ್ಲಿನ ದೇವರಾಜನಗರದ ಭಗವಾನ್ ಸತ್ಯಸಾಯಿ ಸೇವಾ ಸಮಿತಿಯಿಂದ ಸಾಯಿಬಾಬಾ ಅವರ 97ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಓಂಕಾರ, ಸುಪ್ರಭಾತ, ನಗರ ಸಂಕೀರ್ತನೆ, ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿನ ರಾಷ್ಟ್ರೋತ್ಥಾನ ಗೋಶಾಲೆಯ ಗೋವುಗಳಿಗೆ ಹಣ್ಣು ವಿತರಿಸಲಾಯಿತು. ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು. ಶ್ರೀಸಾಯಿ ದೀಪಾರಾಧನೆಯೊಂದಿಗೆ ಸತ್ಯನಾರಾಯಣ ಸ್ವಾಮಿ ಪೂಜೆ ನಡೆಯಿತು.
ಸಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ಎ.ಆರ್. ನಾಗರಾಜನ್ ಮಾತನಾಡಿ, ಸಮಾಜ ಸೇವೆ ಹಾಗೂ ಆಧ್ಯಾತ್ಮಿಕತೆಗೆ ಜೀವನವನ್ನೇ ಮುಡುಪಾಗಿಟ್ಟ ಸಾಯಿಬಾಬಾ ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಸಮಿತಿಯ ಸೇವಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೆ.ಎಸ್. ವಿದ್ಯಾ, ಕೆ.ಎಸ್. ಮೇಘಾ ಹಾಗೂ ರತ್ನಮ್ಮ ಅವರನ್ನು ಗೌರವಿಸಲಾಯಿತು. ಕ್ರಾರ್ಯಕ್ರಮದಲ್ಲಿ ಸಂಚಾಲಕರಾದ ಎಸ್.ಎಲ್. ರಾಮಚಂದ್ರ, ಕೆ.ಎ. ಗೌರಮ್ಮ, ಎಲ್. ಪಾರ್ವತಿ ಶೆಟ್ಟಿ, ಎಂ.ಕೆ. ವಿಶ್ವನಾಥ್, ಬಿ.ಎಸ್. ದೀಪಕ್, ಬಿ.ಎ. ಲಕ್ಷ್ಮಿನಾರಾಯಣ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.