ADVERTISEMENT

ಮಕ್ಕಳ ವಿಜ್ಞಾನ ಹಬ್ಬ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 12:35 IST
Last Updated 12 ಡಿಸೆಂಬರ್ 2019, 12:35 IST
ಆಲಪ್ಪನಹಳ್ಳಿ ಕ್ಲಸ್ಟರ್ ಮಟ್ಟದ ‘ಮಕ್ಕಳ ವಿಜ್ಞಾನ ಹಬ್ಬ’ವನ್ನು ಹಸಿಗಾಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಉದ್ಘಾಟಿಸಿದರು
ಆಲಪ್ಪನಹಳ್ಳಿ ಕ್ಲಸ್ಟರ್ ಮಟ್ಟದ ‘ಮಕ್ಕಳ ವಿಜ್ಞಾನ ಹಬ್ಬ’ವನ್ನು ಹಸಿಗಾಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಉದ್ಘಾಟಿಸಿದರು   

ಸೂಲಿಬೆಲೆ: ಪ್ರತಿಯೊಬ್ಬ ವಿದ್ಯಾರ್ಥಿಯೂ ವೈಜ್ಞಾನಿಕ ಚಿಂತನೆಯ ಮನೋಭಾವ ಬೆಳಸಿಕೊಂಡು ಸಾಗಿದಾಗ ಹೊಸ ಅವಿಷ್ಕಾರಗಳನ್ನು ಬೆಳಕಿಗೆ ತರಲು ಸಾಧ್ಯವಾಗುತ್ತದೆ ಎಂದು ಆಲಪ್ಪನಹಳ್ಳಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಲೋಕೇಶ್ ಹೇಳಿದರು.

ಹೊಸಕೋಟೆ ತಾಲ್ಲೂಕಿನ ಆಲಪ್ಪನಹಳ್ಳಿ ಕ್ಲಸ್ಟರ್ ಮಟ್ಟದ ‘ಮಕ್ಕಳ ವಿಜ್ಞಾನ ಹಬ್ಬ 2019’ ಅನ್ನುಹಸಿಗಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಬ್ಬವನ್ನು ಶಾಲಾಭಿವೃದ್ಧಿ ಪದಾಧಿಕಾರಿಗಳು ಉದ್ಘಾಟಿಸಿದರು.

ವಿದ್ಯಾರ್ಥಿಗಳು ಕಲಿಕಾ ಸಾಮರ್ಥ್ಯವನ್ನು ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಹೊರಹೊಮ್ಮಿಸಲು ಪೂರಕವಾಗಿ ಇಂತಹ ಕಾರ್ಯಕ್ರಮಗಳು ನಡೆಯಬೇಕು ಎಂದರು.

ADVERTISEMENT

ಕ್ಲಸ್ಟರ್ ವ್ಯಾಪ್ತಿಯ 7 ಸರ್ಕಾರಿ ಶಾಲೆಗಳಿಂದ 6, 7 ಮತ್ತು 8 ನೇ ತರಗತಿಯ ಒಟ್ಟು 160 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ ಹಾಗೂ ಸಮನ್ವಯಾಧಿಕಾರಿ ಲಲಿತಮ್ಮ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ರೇಖಾ, ಕರುಣಾ, ಉಮಾದೇವಿ, ಶಿವನಂದಾ, ವೆಂಕಟೇಶ್, ಅನ್ನಪೂರ್ಣ ವಿಜ್ಞಾನ ಹಬ್ಬದ ಉಸ್ತುವಾರಿ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.