ADVERTISEMENT

ಸೀತಾ ರಾಮಚಂದ್ರಸ್ವಾಮಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 5:49 IST
Last Updated 25 ಜನವರಿ 2023, 5:49 IST
ದೊಡ್ಡಬಳ್ಳಾಪುರದ ಅರ್ಕಾವತಿ ಕ್ಷೇತ್ರದಲ್ಲಿ ಮಂಗಳವಾರ ಶ್ರೀಸೀತಾ ರಾಮಚಂದ್ರಸ್ವಾಮಿ ಬ್ರಹ್ಮ ರಥೋತ್ಸವ ನಡೆಯಿತು
ದೊಡ್ಡಬಳ್ಳಾಪುರದ ಅರ್ಕಾವತಿ ಕ್ಷೇತ್ರದಲ್ಲಿ ಮಂಗಳವಾರ ಶ್ರೀಸೀತಾ ರಾಮಚಂದ್ರಸ್ವಾಮಿ ಬ್ರಹ್ಮ ರಥೋತ್ಸವ ನಡೆಯಿತು   

ದೊಡ್ಡಬಳ್ಳಾಪುರ: ತಾಲ್ಲೂ ಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಕಾವತಿ ಕ್ಷೇತ್ರದಲ್ಲಿ 69ನೇ ವರ್ಷದ ಶ್ರೀಸೀತಾ ರಾಮಚಂದ್ರಸ್ವಾಮಿಯ ಬ್ರಹ್ಮ ರಥೋತ್ಸವ ಮಂಗಳವಾರ ಸಂಭ್ರಮದಿಂದ ನಡೆಯಿತು.

ರಥೋತ್ಸವದ ಅಂಗವಾಗಿ ಸೋಮವಾರ ಸಂಜೆ ಸೀತಾರಾಮ ಕಲ್ಯಾಣೋತ್ಸವ ಹಾಗೂ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆದವು.

ತಾಲ್ಲೂಕಿನ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥಕ್ಕೆ ಹೂವು, ಹಣ್ಣು ಸಮರ್ಪಿಸಿ ದೇವರ ದರ್ಶನ ಪಡೆದರು. ಹೋಮ, ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಶಾಸಕ ಟಿ. ವೆಂಕಟರಮಣಯ್ಯ
ಭಾಗವಹಿಸಿದ್ದರು.

ADVERTISEMENT

ಹಮಾಮ್, ಶಿವಪುರ, ಮುತ್ಸಂದ್ರ ಗ್ರಾಮಸ್ಥರಿಂದ ಪ್ರಸಾದ ವಿನಿಯೋಗ ನಡೆಯಿತು. ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದಲ್ಲಿ 68 ವರ್ಷಗಳಿಂದ ಬ್ರಹ್ಮ ರಥೋತ್ಸವ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.