ADVERTISEMENT

ಹಾವು ಕಚ್ಚಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 2:47 IST
Last Updated 6 ಏಪ್ರಿಲ್ 2021, 2:47 IST

ಆನೇಕಲ್: ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್‌ ಸಮೀಪದ ನಿರ್ಮಾಣ ಹಂತದಲ್ಲಿರುವ ಕಲ್ಯಾಣ ಮಂಟಪವೊಂದರಲ್ಲಿ ಹಾವು ಕಡಿದು ತಮಿಳುನಾಡಿನ ಸತ್ಯರಾಜ್‌(34) ಮೃತಪಟ್ಟಿದ್ದಾರೆ.

ಕಲ್ಯಾಣ ಮಂಟಪದಲ್ಲಿ ವೆಲ್ಡಿಂಗ್‌ ಕೆಲಸ ಮಾಡಲು ಸತ್ಯರಾಜ್‌ ಲಾಲ್‌ಬಾಗ್‌ ಸಿದ್ದಾಪುರದಿಂದ ಆನೇಕಲ್‌ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್‌ಗೆ ಬಂದಿದ್ದರು. ಮಧ್ಯಾಹ್ನ ಮೊಬೈಲ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ, ಕಾಂಪೌಂಡ್ ಮೇಲಿದ್ದ ಹಾವೊಂದು ಹಣೆಯ ಮೇಲೆ ಕಚ್ಚಿದೆ. ಕೂಡಲೇ ಸತ್ಯರಾಜ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸತ್ಯರಾಜ್‌ ಮೃತಪಟ್ಟಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ವ್ಯಕ್ತಿ ಸಾವು

ADVERTISEMENT

ದೊಡ್ಡಬಳ್ಳಾಪುರ: ನಗರದ ಹೊರವಲಯದ ಸಿದ್ದೆನಾಯಕನಹಳ್ಳಿ ವೃತ್ತದ ಬಳಿ ಸೋಮವಾರ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಕೋಣನಕುಂಟೆ ನಿವಾಸಿ ಮೋಹನ್‌ಕುಮಾರ್(38) ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಸಹ ಪ್ರಯಾಣಿಕ ನಾಗೇಶ್ ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.