ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆಯಲ್ಲಿ ಮಂಗಳವಾರ ಮಧ್ಯಾಹ್ನ ಪ್ರಸನ್ನ ಲಕ್ಷ್ಮಿವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವಕ್ಕೆ ಅಭಿಜಿನ್ ಲಗ್ನದಲ್ಲಿ ತಹಶೀಲ್ದಾರ್ ಮೋಹನಕುಮಾರಿ, ಶಾಸಕ ನಿಸರ್ಗ ನಾರಾಯಣಸ್ವಾಮಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ರಥೋತ್ಸವದ ಅಂಗವಾಗಿ ಬೆಳಗಿನಿಂದಲೇ ವಿಶೇಷ, ಪೂಜೆ, ಹೋಮಗಳು ನಡೆದವು. ರಥೋತ್ಸವಕ್ಕೂ ಮುನ್ನ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪ್ರಸನ್ನಲಕ್ಷ್ಮೀವೆಂಕಟ ರಮಣಸ್ವಾಮಿ ಉತ್ಸವ ನಡೆಸಲಾಯಿತು. ಮಹಿಳೆಯರಿಂದ ಭಕ್ತಿಗೀತೆ ಗಾಯನ, ವಿವಿಧ ತಂಡಗಳಿಂದ ಭಜನೆಗಳು ನಡೆದವು. ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ದೇವಾಲಯದ ಜೀರ್ಣೋದ್ಧಾರ ಸಮಿತಿ ವತಿಯಿಂದ ಅನ್ನಸಂತರ್ಪಣೆ, ಪಾನಕ ಕೋಸಂಬರಿ,ನೀರು,ಮಜ್ಜಿಗೆ ವಿತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.