ADVERTISEMENT

ಗೀತಂ ವಿವಿಯಲ್ಲಿ ಉಗಾಂಡ ವಿದ್ಯಾರ್ಥಿನಿ ಸಾವು: ಕಲ್ಲು ತೂರಾಟ-ವಿದ್ಯಾರ್ಥಿಗಳ ಗಲಾಟೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 5:15 IST
Last Updated 28 ಏಪ್ರಿಲ್ 2022, 5:15 IST
ಗೀತಂ ವಿವಿಯಲ್ಲಿ ವಿದ್ಯಾರ್ಥಿಗಳಿಂದ ಕಲ್ಲು ತೂರಾಟದಿಂದ ಕ್ಯಾಂಟೀನ್ ಕಿಟಕಿ ಗಾಜುಗಳು ಒಡೆದಿರುವುದು
ಗೀತಂ ವಿವಿಯಲ್ಲಿ ವಿದ್ಯಾರ್ಥಿಗಳಿಂದ ಕಲ್ಲು ತೂರಾಟದಿಂದ ಕ್ಯಾಂಟೀನ್ ಕಿಟಕಿ ಗಾಜುಗಳು ಒಡೆದಿರುವುದು   

ದೊಡ್ಡಬಳ್ಳಾಪುರ: ಇಲ್ಲಿನ ಗೀತಂ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಉಗಾಂಡ ದೇಶದ ವಿದ್ಯಾರ್ಥಿನಿ ಅಸೀನ ಅಗಷ (24) ಬುಧವಾರ ರಾತ್ರಿ ಹಾಸ್ಟೆಲ್ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ.

ವಿದ್ಯಾರ್ಥಿನಿ ಸಾವಿನಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಕಾಲೇಜಿನ ಕಚೇರಿ, ಕ್ಯಾಂಟೀನ್ ಕಿಟಕಿಗಳ ಗಾಜುಗಳನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿ ಸಾವಿಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.ಡಿವೈಎಸ್ಪಿ ನಾಗರಾಜ್, ಇನ್‌ಸ್ಪೆಕ್ಟರ್ ಸತೀಶ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ADVERTISEMENT

ಮೂರು ದಿನಗಳ ಹಿಂದೆಯಷ್ಟೇ ಆಂಧ್ರಪ್ರದೇಶ ಹಾಗೂ ಕರ್ನಾಟಕದ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ವಿದ್ಯಾರ್ಥಿಗಳ ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈಗ ವಿದ್ಯಾರ್ಥಿನಿಸಾವಿನಿಂದ ಗೀತಂ ವಿವಿಯಲ್ಲಿಮತ್ತೆಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವಿದ್ಯಾರ್ಥಿನಿ ಶವವನ್ನು ನಗರದ ಸರ್ಕಾರಿ ಶವಾಗರದಲ್ಲಿ ಇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.