ADVERTISEMENT

ಪ್ರೋತ್ಸಾಹಧನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 2:54 IST
Last Updated 20 ಅಕ್ಟೋಬರ್ 2020, 2:54 IST
ವಿಜಯಪುರ ರೇಷ್ಮೆಗೂಡು ಮಾರುಕಟ್ಟೆಗೆ ಭೇಟಿ ನೀಡಿದ್ದ ಜಂಟಿ ನಿರ್ದೇಶಕ ಎಸ್.ವಿ.ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು
ವಿಜಯಪುರ ರೇಷ್ಮೆಗೂಡು ಮಾರುಕಟ್ಟೆಗೆ ಭೇಟಿ ನೀಡಿದ್ದ ಜಂಟಿ ನಿರ್ದೇಶಕ ಎಸ್.ವಿ.ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು   

ವಿಜಯಪುರ: ‘ರೇಷ್ಮೆಗೂಡು ಮಾರುಕಟ್ಟೆಯಲ್ಲಿ ರೈತರಿಗೆ ಸಿಗಬೇಕಾಗಿರುವ ಎಲ್ಲ ಸೌಲಭ್ಯ ಒದಗಿಸಲು ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು’ ಎಂದು ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕ ಎಸ್.ವಿ. ಕುಮಾರ್ ಸೂಚಿಸಿದರು.

ಇಲ್ಲಿನ ರೇಷ್ಮೆಗೂಡು ಮಾರುಕಟ್ಟೆಗೆ ಭೇಟಿ ನೀಡಿದ್ದ ಅವರು, ಸರ್ಕಾರದಿಂದ ಬಿಡುಗಡೆಯಾಗಿರುವ ಪ್ರೋತ್ಸಾಹಧನ ಸೇರಿದಂತೆ ರೈತರಿಗೆ ಸಿಗುತ್ತಿರುವ ಸೌಲಭ್ಯ, ಸ್ವಚ್ಛತೆ, ರೀಲರ್‌ಗಳು ಮತ್ತು ರೈತರ ಸಮಸ್ಯೆ ಆಲಿಸಿದ ನಂತರ ಮಾತನಾಡಿದರು.

ಕೊರೊನಾ ಸಂಕಷ್ಟದ ನಡುವೆಯೂ ರೇಷ್ಮೆಬೆಳೆ ಬೆಳೆಯುವಲ್ಲಿ ರೈತರು ತೊಡಗಿಸಿಕೊಂಡಿ
ದ್ದಾರೆ. ಇದರಿಂದ ಆರ್ಥಿಕವಾಗಿ ರೈತರಿಗೆ ಸ್ವಲ್ಪಮಟ್ಟಿಗೆ ಹೊಡೆತ ಕಡಿಮೆಯಾಗಿದೆ.ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ರೈತರಿಗೆ ಸಿಗಬೇಕಾಗಿರುವ ಪ್ರೋತ್ಸಾಹಧನ ₹ 30 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದರು.

ADVERTISEMENT

ರೇಷ್ಮೆ ಮಾರುಕಟ್ಟೆಯ ಉಪ ನಿರ್ದೇಶಕಿ ಆಯಿಷಾ ಖಾನಂ ಮಾತನಾಡಿ, ‘ಮಾರುಕಟ್ಟೆಯಲ್ಲಿ ಶುದ್ಧೀಕರಣವಾಗಬೇಕು. ವಿದ್ಯುತ್ ಸಮಸ್ಯೆ, ಸಿ.ಸಿ. ಕ್ಯಾಮೆರಾಗಳನ್ನು ದುರಸ್ತಿಗೊಳಿಸಬೇಕು. ಮಾರುಕಟ್ಟೆಗೆ ₹ 1.20 ಕೋಟಿ ಪ್ರೋತ್ಸಾಹಧನ ಬಂದಿತ್ತು.
₹ 300ಕ್ಕಿಂತಲೂ ಕಡಿಮೆ ಬೆಲೆಗೆ ಗೂಡು ಮಾರಾಟ ಮಾಡಿರುವ ದೇಶೀಯ ತಳಿಯ 1 ಕೆ.ಜಿಗೆ ₹ 30, ದ್ವಿತಳಿ ಗೂಡಿಗೆ ₹ 50ರಂತೆ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ’ ಎಂದರು.

ಎಡಿಎಸ್ ಮುನಿರಾಜು, ಅಮರನಾಥ್, ಪ್ರದೀಪ್ ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.