ADVERTISEMENT

ಸರಹದ್ದು ಸಮಸ್ಯೆ ಇಬ್ಬರು ಪಿಎಸ್‌ಐಗಳ ಅಮಾನತು

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 6:24 IST
Last Updated 27 ನವೆಂಬರ್ 2020, 6:24 IST

ದೊಡ್ಡಬಳ್ಳಾಪುರ: ನ.22 ರಂದು ತಾಲ್ಲೂಕಿನ ಅಪ್ಪಕಾರನಹಳ್ಳಿ ಗ್ರಾಮದ ರಸ್ತೆ ಬದಿಯ ಟಾಟಾ ಏಸ್‌ ವಾಹನದಲ್ಲಿ ಮೃತ ದೇಹ ಪತ್ತೆಯಾಗಿದ್ದ ಸಂದರ್ಭದಲ್ಲಿ ಸರಹದ್ದಿನ ಗೊಂದಲದಿಂದ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ವಿಳಂಭ ಮಾಡಿದ್ದರ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಹಿನ್ನೆಲೆಯಲ್ಲಿ ಇಬ್ಬರು ಸಬ್‌ಇನ್‌ಸ್ಪೆಕ್ಟರ್‌ಗಳನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಆದೇಶ ಮಾಡಿದ್ದಾರೆ.

ಅಮಾನತ್ತಿಗೆ ಒಳಗಾಗಿರುವವರು ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಪೊಲೀಸ್‌ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ಅರುಣ್‌ಕುಮಾರ್‌, ದೊಡ್ಡಬೆಳವಂಗಲ ಪೊಲೀಸ್‌ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ಮಂಜೇಗೌಡ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT