ಸೂಲಿಬೆಲೆ: ಹೋಬಳಿಯ ಚಿಕ್ಕಕೋಲಿಗ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಹಿನ್ನೆಲೆಯಲ್ಲಿ, ಶಿಕ್ಷಕ ಈಶ್ವರಪ್ಪ ಪೂಜಾರಿ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಲಾಗಿದೆ. ಶಿಕ್ಷಕ ಈಶ್ವರಪ್ಪ ಪೂಜಾರಿ ಅವರನ್ನು ಶಾಲೆಗೆ ನಿಯೋಜಿಸಬೇಕು ಎಂದು ಕೆಲವು ಪೋಷಕರು ಆಗ್ರಹಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿವೇಕಾನಂದ, ಮಕ್ಕಳನ್ನು ಹೊಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ. ಶಾಲೆ ಮಕ್ಕಳು, ಶಿಕ್ಷಕ ಈಶ್ವರಪ್ಪ ಪೂಜಾರಿ ಅವರ ವಿರುದ್ಧದ ಅಮಾನತು ಆದೇಶ ಹಿಂಪಡೆಯಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಬೇರೆ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.