ADVERTISEMENT

ಶನಿ ಮಹಾತ್ಮಸ್ವಾಮಿ ದರ್ಶನ ಪಡೆದ ಡಿಕೆಶಿ ದಂಪತಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 8:01 IST
Last Updated 14 ಆಗಸ್ಟ್ 2021, 8:01 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಅವರ ಪತ್ನಿ ಉಷಾ ಅವರು ದೊಡ್ಡಬಳ್ಳಾಪುರದ ಚಿಕ್ಕಮಧುರೆಯ ಶನಿಮಹಾತ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಅವರ ಪತ್ನಿ ಉಷಾ ಅವರು ದೊಡ್ಡಬಳ್ಳಾಪುರದ ಚಿಕ್ಕಮಧುರೆಯ ಶನಿಮಹಾತ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು.   

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಮೊದಲ ಶನಿವಾರದ ಅಂಗವಾಗಿ ತಾಲ್ಲೂಕಿನ ಕನಸವಾಡಿ ಶನಿಮಹಾತ್ಮಸ್ವಾಮಿ ದೇವಾಲಯಕ್ಕೆ ಶನಿವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಂ‍ಪ‍ತಿ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕೊರೊನಾ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಜಿಲ್ಲಾಡಳಿತ ಸೆ.7ರವರೆಗೂ ಮುಜರಾಯಿ ಹಾಗೂ ಖಾಸಗಿ ದೇವಾಲಯಗಳನ್ನು ಸರ್ಕಾರಿ ರಜಾ ದಿನ ಹಾಗೂ ಶನಿವಾರ, ಭಾನುವಾರ ಬಂದ್ ಮಾಡುವಂತೆ ಆದೇಶ ಮಾಡಿದೆ. ಹೀಗಾಗಿ ಮುಂಜಾನೆಯೇ ದೇವಾಲಯಕ್ಕೆ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.