ADVERTISEMENT

ದೇವಾಲಯದ ಬಾಗಿಲು ಮುರಿದು ಹುಂಡಿ ಕಳವು

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 9:37 IST
Last Updated 6 ಜೂನ್ 2020, 9:37 IST

ದೊಡ್ಡಬಳ್ಳಾಪುರ: ತಾಲ್ಲೂಕಿನ ನಾರನಹಳ್ಳಿ ಗ್ರಾಮದಲ್ಲಿ ಕಳ್ಳರು ದೇವಾಲಯದ ಬಾಗಿಲು ಮುರಿದು ಹುಂಡಿಯನ್ನು ಕಳವು ಮಾಡಿದ್ದಾರೆ.

ನಾರನಹಳ್ಳಿ ಗ್ರಾಮದ ಅಮ್ಮಾಜಮ್ಮ ದೇವಾಲಯದಲ್ಲಿನ ಹುಂಡಿಯನ್ನು ಹೊತ್ತೊಯ್ದು ಗ್ರಾಮದ ಹೊರ ವಲಯದ ನೀಲಗಿರಿ ತೋಪಿನಲ್ಲಿ ಹುಂಡಿ ಒಡೆದು ಹಣವನ್ನು ದೋಚಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT