ADVERTISEMENT

ಉಪ ಚುನಾವಣೆಯಲ್ಲಿ ಈಗಾಗಲೇ ಬಿಜೆಪಿ ಗೆದ್ದಿದೆ: ಸುಧಾಕರ್

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 4:53 IST
Last Updated 31 ಅಕ್ಟೋಬರ್ 2020, 4:53 IST
ಆಸ್ಪತ್ರೆ ಉದ್ಘಾಟಿಸಿದ ವೈದ್ಯಕೀಯ ಸಚಿವ ಡಾ.ಸುಧಾಕರ್
ಆಸ್ಪತ್ರೆ ಉದ್ಘಾಟಿಸಿದ ವೈದ್ಯಕೀಯ ಸಚಿವ ಡಾ.ಸುಧಾಕರ್   

ದೇವನಹಳ್ಳಿ: ರಾಜ್ಯದಲ್ಲಿ ಶೇ90ರಷ್ಟು ಸೋಂಕಿತರು ಗುಣಮುಖರಾಗಿರುವುದು ಉತ್ತಮ ಬೆಳವಣಿಗೆ ಎಂದು ವೈದ್ಯಕೀಯ ಸಚಿವ ಡಾ.ಸುಧಾಕರ್ ಹೇಳಿದರು.

ನಗರದ ಶಿರಡಿ ಸಾಯಿಬಾಬಾ ನೂತನ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಕೋವಿಡ್ ನಿಯಂತ್ರಣಕ್ಕೆ ಕೆಲವೊಂದು ನ್ಯೂನತೆ ಸರಿಡಿಸಿಕೊಳ್ಳುವಂತೆ ಸಲಹೆ ನೀಡಿದೆ. ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಎರಡನೇ ಹಂತದ ಕೊರೊನಾ ಸೋಂಕು ಅಪಾಯಕಾರಿ ಎಂಬುದಕ್ಕೆ ಸ್ಪಷ್ಟ ಮಾಹಿತಿ ಇಲ್ಲ. ರಾಜ್ಯದಲ್ಲಿ ಶೇಕಡ 1.35ರಷ್ಟು ಕೊರೊನಾ ಸೋಂಕಿತರು ಸಾವನ್ನಪ್ಪತ್ತಿದ್ದಾರೆ ಅಷ್ಟೇ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯ ಸಾಕಷ್ಟು ಸುಧಾರಣೆಯಾಗುತ್ತಿದೆ ಎಂದು ಹೇಳಿದರು.

ADVERTISEMENT

’ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಈಗಾಗಲೇ ಬಿಜೆಪಿ ಗೆದ್ಧಿದೆ. ಅಧಿಕೃತವಾಗಿ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ ಅಷ್ಟೇ. ಶಿರಾ ಕ್ಷೇತ್ರದಲ್ಲಿ ಗೆಲ್ಲುವ ಅಂತಿಮ ಘಟ್ಟದ ತಂತ್ರಗಾರಿಕೆ ನಡೆದಿದೆ‘ ಎಂದು ಹೇಳಿದರು.

ಶಿರಡಿಸಾಯಿ ಆಸ್ಪತ್ರೆ ಆಡಳಿತ ಮಂಡಳಿ ಅಧ್ಯಕ್ಷ ಡಾ.ಮುನಿರಾಜು, ವ್ಯವಸ್ಥಾಪಕಿ ಡಾ.ಸುಗುಣರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.