ADVERTISEMENT

ದೊಡ್ಡಬಳ್ಳಾಪುರ: ನರೇಗಾ ಕಾಮಗಾರಿ ಜಗಳ ವೃದ್ಧೆ ಸಾವಿನಲ್ಲಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 7:25 IST
Last Updated 26 ಜೂನ್ 2022, 7:25 IST
ಗೌರಮ್ಮ
ಗೌರಮ್ಮ   

ತೂಬಗೆರೆ (ದೊಡ್ಡಬಳ್ಳಾಪುರ):ತಾಲ್ಲೂಕಿನ ಚಿಕ್ಕಮುದ್ದೇನಹಳ್ಳಿಯಲ್ಲಿ ನರೇಗಾ ಯೋಜನೆಯ ಕಾಮಗಾರಿ ಕುರಿತುಶನಿವಾರ ಎರಡು ಕುಟುಂಬಗಳ ನಡುವೆ ಆರಂಭವಾದ ಜಗಳ ವೃದ್ಧೆಯೊಬ್ಬರ ಸಾವಿನಲ್ಲಿ ಅಂತ್ಯವಾಗಿದೆ.

ಹೊಡೆದಾಟದಲ್ಲಿ ಗೌರಮ್ಮ (60) ಎಂಬುವರು ಮೃತಪಟ್ಟಿದ್ದಾರೆ. ಈ ಸಂಬಂಧ ಮೃತ ಮಹಿಳೆಯ ಸಂಬಂಧಿಗಳಾದ ಮಾರುತಿ, ಸುಧಾಕರ್‌ ಎಂಬುವರನ್ನು ಬಂಧಿಸಲಾಗಿದೆ.

ಶುಕ್ರವಾರ ಸಂಜೆ ನರೇಗಾ ಕಾಮಗಾರಿ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಜಗಳ ಬಿಡಿಸಲು ಮಧ್ಯೆ ಪ್ರವೇಶಿಸಿದ ಗೌರಮ್ಮ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದೆ.

ADVERTISEMENT

ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಸತೀಶ್ ಸ್ಥಳಕ್ಕೆ ಭೇಟಿ ನೀಡಿಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.