ADVERTISEMENT

ದರೋಡೆಕೋರರಿಗೆ ಗುಂಡೇಟು

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2018, 14:08 IST
Last Updated 30 ಆಗಸ್ಟ್ 2018, 14:08 IST

ದೇವನಹಳ್ಳಿ: ಬಂಧಿಸಲು ಹೋದ ಪೊಲೀಸರ ಮೇಲೆ ದರೋಡೆಕೋರರು ಕಲ್ಲು ತೂರಿದ ಪರಿಣಾಮ ಪೊಲೀಸರು ಗುಂಡು ಹಾರಿಸಿದ ಘಟನೆ ಬುಧವಾರ ರಾತ್ರಿ ಬೊಮ್ಮವಾರ ನೀಲಗಿರಿ ತೋಪಿನಲ್ಲಿ ನಡೆದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಉದಯಕುಮಾರ್ ಮತ್ತು ಪವನ್ ಬೆಂಗಳೂರು ನಗರದ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಅನೇಕ ಬಡಾವಣೆಗಳಲ್ಲಿ ಗ್ಯಾಂಗ್ ಕಟ್ಟಿಕೊಂಡು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಮಾಹಿತಿ ಮೇರೆಗೆ ಆರೋಪಿಗಳನ್ನು ಹಿಂಬಾಲಿಸಿದ ಯಲಹಂಕ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಮಂಜೇಗೌಡ ನೇತೃತ್ವದ ತಂಡ ಬಂಧಿಸಲು ಮುಂದಾದಾಗ ಆರೋಪಿಗಳಿಬ್ಬರು ಕಲ್ಲು ತೂರಿದ ಪರಿಣಾಮ ಅತ್ಮ ರಕ್ಷಣೆಗಾಗಿ ಗುಂಡು ಹಾರಿಸುವುದು ಅನಿರ್ವಾಯವಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.