ADVERTISEMENT

ಆನೇಕಲ್ | ಬೈಕ್‌ಗೆ ಟಿಪ್ಪರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 2:26 IST
Last Updated 17 ಆಗಸ್ಟ್ 2025, 2:26 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಆನೇಕಲ್: ತಾಲ್ಲೂಕಿನ ಚಂದಾಪುರ ಕೆರೆ ಸಮೀಪ ಶನಿವಾರ ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಹೀಲಲಿಗೆ ಜಯರಾಮರೆಡ್ಡಿ (58) ಮೃತರು. ಅವರು ಆರ್‌ಜೆಎಸ್‌ ಪಾಲಿಟೆಕ್ನಿಕ್‌ನಲ್ಲಿ ಕೆಲಸ ಮಾಡುತ್ತಿದ್ದು, ಶನಿವಾರ ಹೀಲಲಿಗೆಯಿಂದ ಚಂದಾಪುರದತ್ತ ಬರುವ ವೇಳೆ ಟಿಪ್ಪರ್‌ ಹಿಂದೆಯಿಂದ ಡಿಕ್ಕಿ ಹೊಡೆದಿದೆ. ಟಿಪ್ಪರ್‌ ಕೆಳಗೆ ಸಿಲುಕಿ ಮೃತಪಟ್ಟಿದ್ದಾರೆ. ಬೈಕ್‌ ನಜ್ಜುಗುಜ್ಜಾಗಿದೆ.

ಸೂರ್ಯಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.