ಚನ್ನಪಟ್ಟಣ: ತಾಲ್ಲೂಕಿನ ಮಳೂರುಪಟ್ಟಣ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಇದ್ದ ಚೌಡೇಶ್ವರಿ ದೇವಾಲಯದ ಗೋಪುರ ಬುಧವಾರ ರಾತ್ರಿ ಕುಸಿದು ಬಿದ್ದಿದೆ.
₹40 ಲಕ್ಷ ವೆಚ್ಚದಲ್ಲಿ ನಿರ್ಮಾಣ ಕಾರ್ಯ ಸಾಗುತ್ತಿತ್ತು. ಮುಜರಾಯಿ ಇಲಾಖೆಗೆ ಸೇರಿರುವ ಈ ದೇವಾಲಯ ಚೋಳರ ಕಾಲದ್ದು. ಹಳೆ ಗೋಪುರ ಕೆಡವಿ ಹೊಸ ಗೋಪುರ ನಿರ್ಮಾಣ ನಡೆದಿತ್ತು. ಸುಮಾರು 2 ವರ್ಷದಿಂದ ದೇವಾಲಯದ ಕಾಮಗಾರಿ ನಡೆಯುತ್ತಿತ್ತು. ಆದರೆ, ಗುತ್ತಿಗೆ ಪಡೆದಿದ್ದ ತಮಿಳುನಾಡು ಮೂಲದ ವ್ಯಕ್ತಿ ಮಾಡಿರುವ ಕಳಪೆ ಕಾಮಗಾರಿಯಿಂದ ಈ ದುರಂತ ನಡೆದಿದೆ ಎಂದು ಗ್ರಾಮಸ್ಥರ ಆರೋಪವಾಗಿದೆ.
ವಿಷಯ ತಿಳಿದು ಮುಜರಾಯಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.